ಮಂಗಳೂರು

ಮಂಗಳೂರು: ವೇಶ್ಯಾವಾಟಿಕೆ ದಂಧೆ – ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್

ಮಂಗಳೂರು : ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಅಪ್ರಾಪ್ತ ವಯಸ್ಕ ಪಿಯುಸಿ ವಿದ್ಯಾರ್ಥಿನಿಯರು ಸಹಿತ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದು,ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಹಿಳಾ ಮತ್ತು ಕಲ್ಯಾಣ ಇಲಾಖೆ, ನಗರದ ಕಾಲೇಜೊಂದರ ಮುಖ್ಯಸ್ಥೆ ಮತ್ತು ಸಂತ್ರಸ್ತೆ ನೀಡಿದ ದೂರಿನ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಲವು ದಿನಗಳಿಂದ ದಂಧೆ ನಡೆಸುತ್ತಿದ್ದ ಮಹಿಳೆಯರು ಮತ್ತು ಪುರುಷನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೋಕ್ಸೋ ಸೇರಿ ಇತರ ಕಾಯಿದೆಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದರು. ವಯಸ್ಕ ಯುವತಿಯರನ್ನು ನಿರಂತರವಾಗಿ ದಂಧೆಗೆ ಬಳಸಿಕೊಳ್ಳುತ್ತಿರುವುದು ತನಿಖೆ ವೇಳೆ ಕಂಡು ಬಂದಿದೆ ಎಂದು ತಿಳಿಸಿದರು.

ವಿದ್ಯಾರ್ಥಿನಿಯರಿಗೆ ಬೆದರಿಕೆ

ರಕ್ಷಣೆ ಮಾಡಲಾದ ಸಂತ್ರಸ್ತೆಯರು ಪಿಯುಸಿ ವಿದ್ಯಾರ್ಥಿನಿಯರಾಗಿದ್ದು, ತಮ್ಮ ಮೇಲಾದ ದೌರ್ಜನ್ಯವನ್ನು ಕಾಲೇಜಿನ ಮುಖ್ಯಸ್ಥೆಯ ಬಳಿ ತೋಡಿಕೊಂಡಿದ್ದಾರೆ. ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದ ಮನೆಯಲ್ಲಿ ಸಿಸಿಟಿವಿ ಅಳವಡಿಸಿದ್ದು, ವಿದ್ಯಾರ್ಥಿನಿಯರಿಗೆ ವಿಡಿಯೋ ಬಯಲು ಮಾಡಿ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿ ಹೀನ ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿತ್ತು ಎಂದು ತಿಳಿಸಿದ್ದಾರೆ.

ಕೇರಳ ಮೂಲದ ಗ್ರಾಹಕರು ಸೇರಿದಂತೆ ಸ್ಥಳೀಯರೂ ಇಲ್ಲಿ ಗ್ರಾಹಕರಾಗಿ ಬರುತ್ತಿದ್ದರು ಎಂದು ತಿಳಿಸಿದರು. ಕೇರಳ ಮೂಲದ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮಹಿಳಾ ಪೊಲೀಸ್ ಠಾಣೆಯ ಸಖಿ ಕೇಂದ್ರದಲ್ಲಿ ಬಾಲಕಿಯರಿಗೆ ಕೌನ್ಸಲಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಗಂಭೀರವಾಗಿ, ಸಿಸಿಬಿ ಮೂಲಕ ಆಳವಾದ ತನಿಖೆ ನಡೆಸುವುದಾಗಿ ತಿಳಿಸಿದರು.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

29 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

54 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago