News Karnataka Kannada
Monday, April 29 2024
ಮಂಗಳೂರು

ಮಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತ

Madikeri: Boy killed in tiger attack at Palleri
Photo Credit :

ಮಂಗಳೂರು: ಹೆರಿಗೆಗೆಂದು ದಾಖಲಾಗಿದ್ದ ತಾಯಿ – ಮಗು ಮೃತಪಟ್ಟ ಬಗ್ಗೆ ಕುಟುಂಬಸ್ಥರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯ ನಿರ್ಲಕ್ಷ್ಯ ವಹಿಸಿದ್ದಾರೆಂದು ಆರೋಪಿಸಿ ಆಗ್ರಹ ವ್ಯಕ್ತಪಡಿಸಿರುವ ಘಟನೆ ನಿನ್ನೆ ನಡೆದಿದೆ.

ನಿನ್ನೆ ಬೆಳಗ್ಗೆ ವಿಟ್ಲದ ಸವಿತಾ ಎಂಬ ಮಹಿಳೆ ಹೆರಿಗೆಗೆಂದು ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ, ಅದಾಗಲೇ ಗರ್ಭಿಣಿಯ ಹೊಟ್ಟೆಯಲ್ಲಿಯೇ ಶಿಶು ಮೃತಪಟ್ಟಿದೆ ಎಂದು ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದರು.

ಆದರೆ ಸಂಜೆಯ ವೇಳೆಗೆ ಗರ್ಭಿಣಿ ತಾಯಿಯೂ ಮೃತಪಟ್ಟಿದ್ದಾರೆ. ಮಗು ಹೊಟ್ಟೆಯಲ್ಲಿ ಮೃತಪಟ್ಟಿದ್ದರೂ ಶೀಘ್ರ ಮಗುವನ್ನು ತೆಗೆಯದಿರೋದೇ ಗರ್ಭಿಣಿ ಮೃತಪಡಲು ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆಲ್ಲಾ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ನ್ಯಾಯಕ್ಕಾಗಿ ಕುಟುಂಬಸ್ಥರು ಆಗ್ರಹಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು