News Karnataka Kannada
Friday, May 10 2024
ಮಂಗಳೂರು

ಮಂಗಳೂರು: ಸರಣಿ ಅಪಘಾತ ಎಸಗಿದ್ದ ಕಾರು ಚಾಲಕನ ತೀವ್ರ ವಿಚಾರಣೆ- ಎನ್. ಶಶಿಕುಮಾರ್

Crime
Photo Credit : News Kannada

ಮಂಗಳೂರು : ನಗರದ ಬಲ್ಲಾಳ್‌ ಬಾಗ್‌ನಲ್ಲಿ ಶನಿವಾರ ಸರಣಿ ಅಪಘಾತಕ್ಕೆ ಕಾರಣನಾದ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್‌ನ ವಿಚಾರಣೆ ಮುಂದುವರಿಸಲಾಗಿದ್ದು, ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆರೋಪಿ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತ ಮದ್ಯ ಅಥವಾ ಡ್ರಗ್ಸ್ ಸೇವಿಸಿರುವ ಬಗ್ಗೆ ಪರೀಕ್ಷೆಗೆ ರಕ್ತ ಮತ್ತು ಇತರ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿ ಇನ್ನಷ್ಟೇ ಕೈ ಸೇರಬೇಕಿದೆ. ಆತ ಈ ಹಿಂದೆ ಕೆಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವ ಮಾಹಿತಿ ಇದ್ದು ಆ ಕಾರ್ಯಕ್ರಮಗಳಲ್ಲಿ ಯಾವುದಾದರೂ ಅಪರಾಧ ಪ್ರಕರಣಗಳು ನಡೆದಿವೆಯೇ ಎಂಬ ಕುರಿತು ಕೂಡ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು