ಮಂಗಳೂರು:– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಸವಿತ ಸಮಾಜದ ಸಂಯುಕ್ತಾಶ್ರಯದಲ್ಲಿ ಫೆ.8ರ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಮಾಣಿಕ್ಯ ಅವರು ಶ್ರೀ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ದಕ್ಷಿಣ ಕನ್ನಡ ಜಿಲ್ಲಾ ಸವಿತ ಸಮಾಜದ ಅಧ್ಯಕ್ಷ ಆನಂದ ಭಂಡಾರಿ, ಕಾರ್ಯದರ್ಶಿ ವಸಂತ .ಎಂ., ಮಂಗಳೂರು ತಾಲೂಕು ಸವಿತ ಸಮಾಜದ ಕಾರ್ಯದರ್ಶಿ ಸಂತೋರ್ಷ ಭಂಡಾರಿ, ಉಳ್ಳಾಲ ವಲಯದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ, ಸುರತ್ಕಲ್ ವಲಯದ ಅಧ್ಯಕ್ಷ ನಟೇಶ್ ಬೈಕಂಪಾಡಿ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.