ಮಂಗಳೂರು : ಸ್ನೇಹಿತರಿಂದ ಸಾಲ ಮಾಡಿ ಹಿಂತಿರುಗಿಸಲಾಗದ ಬೇಸರದಲ್ಲಿ ಯುವಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಸೇಹಿತರಿಂದ ಸಾಲ ಮಾಡಿ ಹಿಂತಿರುಗಿಸಲಾಗದ ಬೇಸರದಲ್ಲಿ ಯುವಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಲಾರೆನ್ಸ್ ಡಿಸೋಜ 24ಮೃತ ವ್ಯಕ್ತಿ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಸೋಮವಾರ ಬೆಳಿಗ್ಗೆ ಹನ್ನೊಂದು ಗಂಟೆಗೆ ಮನೆ ಬಿಟ್ಟು ಹೋಗಿದ್ದ ಪತ್ರವನ್ನು ನೋಡಿದ ತಾಯಿ ಬಳಿಕ ಹುಡುಕಾಟಕ್ಕೆ ತೊಡಗಿದರು .ಸುರತ್ಕಲ್ ಪೊಲೀಸರಿಗೂ ಮಾಹಿತಿ ನೀಡಿದ್ದರು ಇದೇ ವೇಳೆ ಮಧ್ಯಾಹ್ನ 3ಗಂಟೆ ವೇಳೆಗೆ ಸುರತ್ಕಲ್ ಬಳಿಯ ಮಲ್ಲಮಾರ್ ಬೀಚ್ ನಲ್ಲಿ ಕೆಂಡ್ರಿಕ್ ಲಾರೆನ್ಸ್ ಶವ ಪತ್ತೆಯಾಗಿದೆ .
ಡೆತ್ ನೋಟ್ ನಲ್ಲಿ ಕೆಲವರ ಹೆಸರು ಬರೆದಿದ್ದು ಅವರಿಗೆ ಆಗಬೇಕಾದ ಸಣ್ಣಪುಟ್ಟ ಹಣದ ಅವಶ್ಯಕತೆಗಳನ್ನು ಬರೆದಿದ್ದಾನೆ. ಅಲ್ಲದೆ ಈ ಹಣವನ್ನು ಹಿಂದಿರುಗಿಸುವುದಕ್ಕಾಗಿ ತಾಯಿಯ ಬಂಗಾರವನ್ನು ಕೊಂಡೊಯ್ದು ಹನ್ನೆರಡು ಸಾವಿರೂ ಅಡವಿಟ್ಟಿದ್ದ ಆದರೆ ಹಣವನ್ನು ಆಗ ಬೇಕಾದವರಿಗೆ ಹಿಂತಿರುಗಿಸಲಾಗದೆ ಕೈಯಲ್ಲಿ ಖರ್ಚಾಗಿ ಖಾಲಿಯಾಗಿತ್ತು ಎಂದು ಬರೆದಿದ್ದಾನೆ. ಜೊತೆಗೆ ಕುಡಿತದ ಚಟ ಹೊಂದಿದ್ದರಿಂದ ಅದಕ್ಕೆ ಹಣ ಖಾಲಿಯಾಗಿತ್ತು ಎನ್ನಲಾಗಿದೆ .
ಅಲ್ಲದೆ ತನ್ನ ಮೊಬೈಲ್ ವಿವರಗಳನ್ನು ಡೆತ್ ನೋಟ್ ನಲ್ಲಿ ಬರೆದಿದ್ದಾನೆ ಗೂಗಲ್ ಪೇ ಎಟಿಎಂ ಇತ್ಯಾದಿ ಪಾಸ್ವರ್ಡ್ಗಳನ್ನು ಬರೆದಿದ್ದಲ್ಲದೆ ಮೇಲಿನ ಕಾರಣಗಳಲ್ಲದೆ ಸಾವಿಗೆ ಪ್ರಮುಖ ಕಾರಣವೆಂದು ಮೊಬೈಲ್ ನಲ್ಲಿದೆ . sorry ಅಮ್ಮ ಎನ್ನುತ್ತಾ ಪತ್ರ ಬರೆದು ಮುಗಿಸಿದ್ದಾನೆ . ತುಳು ಭಾಷೆಯಲ್ಲಿ ಇಂಗ್ಲಿಷ್ ವರ್ಣಮಾಲೆಯಲ್ಲಿ ಪತ್ರವನ್ನು ಬರೆಯಲಾಗಿದೆ. ಸಾಮಾನ್ಯ ಕುಟುಂಬದ ಲಾರೆನ್ಸ್ ಸಣ್ಣ ವಯಸ್ಸಿನಲ್ಲಿಯೇ ಖಾಸಗಿಯಾಗಿ ಕೆಲಸಕ್ಕೆ ಸೇರಿದ್ದು ಕುಡಿಯುವುದನ್ನು ರೂಢಿಸಿಕೊಂಡಿದ್ದ ಇದೀಗ ಸಣ್ಣ ಮಟ್ಟಿನ ಸಾಲದ ಮೊತ್ತವನ್ನು ದೊಡ್ಡ ಸಮಸ್ಯೆ ನ್ನಾಗಿಸಿ ಜೀವನ ಮುಗಿಸಿದ್ದಾನೆ. ಸುರತ್ಕಲ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.