News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಸಿನಿಮೀಯಾ ರೀತಿಯಲ್ಲಿ ಕಳ್ಳನನ್ನು ಅಟ್ಟಾಡಿಸಿ ಹಿಡಿದ ಪೋಲಿಸ್

Polive Varun
Photo Credit : News Kannada

ಮಂಗಳೂರು : ಸಿನಿಮೀಯಾ ರೀತಿಯಲ್ಲಿ ಪೋಲಿಸ್  ಕಳ್ಳನನ್ನು ಅಟ್ಟಾಡಿಸಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಘಟನೆಯು ನಗರದ ಹೃದಯಭಾಗದ ಸ್ಟೇಟ್ ಬ್ಯಾಂಕ್ ಬಳಿ ನಡೆದಿದೆ ಸದ್ಯ ವೀಡಿಯೋ ವೈರಲ್ ಆಗಿದೆ .

ನಿನ್ನೆ ಮಧ್ಯಾಹ್ನ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಮುಂಭಾಗದ ನೆಹರೂ ಮೈದಾನದಲ್ಲಿ ಉತ್ತರಪ್ರದೇಶ ಮೂಲದ ಗ್ರೈನೆಡ್ ಕೆಲಸಮಾಡುವ ವ್ಯಕ್ತಿಯೋರ್ವನ ಮೊಬೈಲ್ ಕಳವು ಮಾಡಿ ಪರಾರಿಯಾಗಿದ್ದರು .ತಕ್ಷಣವೇ ಆತ ಹಾಗೂ ಸ್ಥಳೀಯರ ಎಚ್ಚೆತ್ತ ಬೊಬ್ಬೆ ಹಾಕಿ ಕಳ್ಳನನ್ನು ಓಡಿಸಿಕೊಂಡು ಹೋಗಿದ್ದಾರೆ. ಈ ಸಂದರ್ಭ ಎಸೈ ವರುಣ್ ಅವರು ಗಮನಿಸಿ ಸಿನಿಮೀಯ ರೀತಿಯಲ್ಲಿ ಆತನನ್ನು ಬೆನ್ನಟ್ಟಿದ್ದಾರೆ. ಆತ ಹ್ಯಾಮಿಲ್ಟನ್ ಸರ್ಕಲ್ ಬಳಿ ತಲುಪುತ್ತಿದ್ದಂತೆ ಆತನನ್ನು ನೆಲಕ್ಕೆ ಕೆಡವಿ ಹಿಡಿದಿದ್ದಾರೆ .

ಕಳ್ಳತನದಲ್ಲಿ 3ಮೂವರು ಭಾಗಿಯಾಗಿದ್ದಾರೆ ಮತ್ತೋರ್ವ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ವಿಡಿಯೋ ನೋಡಿದ ನೆಟ್ಟಿಗರು ಪೊಲೀಸ್ ಅಧಿಕಾರಿಯ ವರುಣ್ ಅವರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋನ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸಹ ಹಂಚಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು