News Karnataka Kannada
Sunday, April 28 2024
ಮಂಗಳೂರು

ಮಡಿಕೇರಿ ಜಿಲ್ಲೆಯಲ್ಲಿ ಏ.20ರಂದು ತಾಲೂಕು ಮಟ್ಟದ ಆರೋಗ್ಯ ಮೇಳ!

Sathish D C Kodagu
Photo Credit :

ಮಡಿಕೇರಿ: ಜಿಲ್ಲೆಯಲ್ಲಿ ಏ.20ರಂದು ತಾಲೂಕು ಮಟ್ಟದ ಆರೋಗ್ಯ ಮೇಳ ನಡೆಯಲಿದೆ. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್‌ ನಿರ್ದೇಶಿಸಿದ್ದಾರೆ.

ಮೇಳಕ್ಕೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಸಮನ್ವಯ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಮೇಳ ಬಗ್ಗೆ ತಾಲೂಕು ಮಟ್ಟದಲ್ಲಿಯೂ ಮಾಹಿತಿ ನೀಡುವಂತಾಗಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಹಂತದ ವೈದ್ಯಾಧಿಕಾರಿಗಳು ತಂಡಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಆಯುಷ್ಮಾನ್ ಆರೋಗ್ಯ ಕಾರ್ಯಕ್ರಮದಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಹಾಗೂ ಪೌರ ಕಾರ್ಮಿಕರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಆರೋಗ್ಯಕ್ಕೆ ಸಂಬಂಧಿಸಿದಂತೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಮೇಳದಲ್ಲಿ ಮಳಿಗೆ ತೆರೆಯಲು ಅವಕಾಶ ಕಲ್ಪಿಸಬೇಕು ಹಾಗೂ ಪೋಷಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ಒದಗಿಸುವ ಮಳಿಗೆ ತೆರೆಯಲು ಸೂಕ್ತ ಕ್ರಮ ವಹಿಸಬೇಕೆಂದು ಡಿಸಿ ಮಾಹಿತಿ ನೀಡಿದರು.

ಆರೋಗ್ಯ ಮೇಳದಲ್ಲಿ ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್, ರಕ್ತದೊತ್ತಡ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆಯನ್ನು ನಡೆಸಲಾಗುವುದು ಹಾಗೂ ವಿವಿಧ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಹಾಗೂ ಔಷಧಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್.ವೆಂಕಟೇಶ್ ಹೇಳಿದರು.

ಈ ಮೇಳದಲ್ಲಿ ಹೆಸರು ನೋಂದಣಿ , ಎನ್‍ಸಿಡಿ ಮತ್ತು ಟಿಬಿ ಸ್ಕ್ರೀನಿಂಗ್, ಆರೋಗ್ಯ ಶಿಕ್ಷಣದ ಬಗ್ಗೆ ಆಪ್ತ ಸಮಾಲೋಚನೆ, ಆಯುಷ್ ಕ್ಲಿನಿಕ್, ವೈದ್ಯಕೀಯ ಆರೈಕೆ, ಪ್ರಯೋಗಾಲಯ ಮತ್ತು ವಿಕಿರಣ ಸೇವೆಗಳು, ಔಷಧ ವಿತರಣೆ, ಆಯುಷ್ ಔಷಧ ವಿತರಣೆ ಹಾಗೂ ಆರೋಗ್ಯ ಸೇವೆಗಳ ಜಾಗೃತಿ ಸೇರಿದಂತೆ ವಿವಿಧ ಮಳಿಗೆಗಳು ಇರಲಿವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು