ಮಂಗಳೂರು : ರಾಜ್ಯ ಸರ್ಕಾರ ಮಂಡಿಸಿರುವ ಮತಾಂತರ ನಿಷೇಧ ಕಾಯ್ದೆ ಮತ್ತು ಕೇಂದ್ರ ಸರ್ಕಾರ ಮಂಡಿಸಿದ ಮಹಿಳೆಯರ ಮದುವೆ ವಯಸ್ಸನ್ನು 21 ಕ್ಕೇರಿಸಿರುವುದು ಗೊಂದಲಕಾರಿಯಾಗಿದೆ ಎಂದು ಮಾಜಿ ಸಚಿವ ಯು. ಟಿ. ಖಾದರ್ ಹೇಳಿದರು.
ಮತಾಂತರ ನಿಷೇಧ ಕಾಯ್ದೆ, ಮದುವೆ ವಯಸ್ಸು 21 ಏರಿಕೆ ಕುರಿತು ಯುಟಿ ಖಾದರ್ ಹೇಳಿಕೆ. ನಗರದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತರಾತುರಿಯಲ್ಲಿ ಮಂಡಿಸಿದ ಮತಾಂತರ ನಿಷೇಧ ಕಾಯ್ದೆ ಗೊಂದಲಕಾರಿಯಾಗಿದೆ. ಬಿಜೆಪಿಯವರಿಗೆ ಈ ಕಾಯ್ದೆಗೆ ತಡೆಯಾಜ್ಞೆ ಸಿಗಲಿದೆ. ಚುನಾವಣಾ ಲಾಭಕ್ಕೋಸ್ಕರ ಜನರಲ್ಲಿ ಗೊಂದಲ ಸೃಷ್ಟಿಸುವುದೇ ಇವರ ಉದ್ದೇಶ ಎಂದರು.
21 ಕಾಯಬೇಕು : ಇನ್ನೂ ಮಹಿಳೆಯರ ಮದುವೆ ವಯಸ್ಸು ಹೆಚ್ಚಿಸಿರುವ ವಿಚಾರದಲ್ಲಿ ಗೊಂದಲವಿದೆ. ಮನೆಯವರು ಸಂಬಂಧ ನೋಡಿ ಮದುವೆ ಮಾಡಲು 21 ವರ್ಷ ಕಾಯಬೇಕು. ಆದರೆ ಲಿವಿಂಗ್ ಟುಗೆದರ್ಗೆ 18 ವರ್ಷದಲ್ಲಿ ಅವಕಾಶವಿದೆ. ಇದು ಕೂಡ ಗೊಂದಲಕಾರಿ ಎಂದು ಹೇಳಿದರು.
ಬಿಜೆಪಿ ಎಂಇಎಸ್ ಪಾರ್ಟನರ್ : ಬೆಳಗಾವಿ ಗಲಾಟೆ ವಿಚಾರದಲ್ಲಿ ಕನ್ನಡಪರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ನಾವು ಒಂದು ಭಾಷೆಗೆ ಗೌರವ ನೀಡಿ ನಮ್ಮ ಭಾಷೆಯನ್ನು ಬೆಳೆಸಬೇಕು. ನಮ್ಮ ಭಾಷೆ ಕಲಿಯುವ ಜೊತೆಗೆ ಬೇರೆ ಭಾಷೆ ಕಲಿಯಬೇಕು. ಎಂಇಎಸ್ ಬಗ್ಗೆ ಬಿಜೆಪಿಗೆ ಹೆಚ್ಚಾಗಿ ಗೊತ್ತಿದೆ. ಅವರು ಚುನಾವಣೆಯಲ್ಲಿ ಪಾರ್ಟನರ್ ಆಗಿದ್ದವರು. ಬಂದ್ಗೆ ಬೆಂಬಲಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ತಿಳಿಸುತ್ತಾರೆ ಎಂದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ