ಬೆಳ್ತಂಗಡಿ: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕೆಳಗೆ ಬಿದ್ದು ಗಾಯಗೊಂಡು ಮ್ರತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ನಿವಾಸಿ ದೂಮ ನಾಯ್ಕ (65) ಮ್ರತಪಟ್ಟವರು.
ಮನೆ ಸಮೀಪದಲ್ಲಿದ್ದ ಮರಕ್ಕೆ ಗೆಲ್ಲು ಕಡಿಯಲೆಂದು ದೂಮ ನಾಯ್ಕ ಅವರು ಮರಕ್ಕೆ ಹತ್ತಿ ಗೆಲ್ಲು ಕಡಿಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.
ಗಂಭೀರವಾಗಿ ಗಾಯಗೊಂಡ ದೂಮ ನಾಯ್ಕ ಅವರನ್ನು ಮನೆಮಂದಿ ಹಾಗೂ ಸ್ಥಳೀಯರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು ಆದರೆ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.