ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜೂನ್ 6ಕ್ಕೆ ಮುಂದೂಡಿದೆ.
ವಿಶ್ವ ಹಿಂದು ಪರಿಷತ್ ಪರವಾಗಿ ಚಿದಾನಂದ ಕೆದಿಲಾಯ ಮತ್ತು ಮಸೀದಿ ಆಡಳಿತ ಮಂಡಳಿಯ ಪರವಾಗಿ ಎನ್ ಪಿ ಶೆಣೈ ವಾದ ಮಂಡಿಸಿದರು .ಮಸೀದಿ ನವೀಕರಣ ಸಂದರ್ಭ ದೇವಾಲಯವನ್ನು ಹೋಲುವ ರಚನೆ ಕಂಡು ಬಂದಿರುವ ಹಿನ್ನೆಲೆ ಯಲ್ಲಿ ಜ್ಞಾನವಾಪಿ ಮಾದರಿಯಲ್ಲಿ ಕೋರ್ಟ್ ಕಮಿಷನರ್ ಮೂಲಕ ಪುರಾತತ್ವ ಇಲಾಖೆಯ ಸಹಾಯದಲ್ಲಿ ಸರ್ವೇ ನಡೆಸಬೇಕೆಂದು ಕೆದಿಲಾಯ ರ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಈ ಪ್ರಕರಣದಲ್ಲಿ ಸರಕಾರವನ್ನು ಕೂಡ 1ಪಕ್ಷ ಕಾರಣನಾಗಿ (ಪಾರ್ಟಿ )ಮಾಡಬೇಕು ಎಂಬುದಾಗಿ ಅರ್ಜಿ ಸಲ್ಲಿಸಿದರು. ಅಲ್ಲದೆ ಈಗಾಗಲೇ ಸ್ಥಳೀಯ ಗ್ರಾಮ ಪಂಚಾಯತ್ ಪಿಡಿಒ ಅವರು ಅನುಮತಿಯನ್ನು ತಡೆ ಹಿಡಿದಿದ್ದಾರೆ ಎಂದು ಹೇಳಿದರು. ಎನ್ ಪಿ ಶೆಣೈ ವಾದ ಮಂಡಿಸಿ ಮಳಲಿಯಲ್ಲಿ ಯಾವ ದೇವರಿದ್ದರೂ ದೇವಸ್ಥಾನ ಇತಿಹಾಸ ಏನು ಎಂಬ ಬಗ್ಗೆ ಅರ್ಜಿದಾರರು ಸಾಕ್ಷ್ಯ ನೀಡಿಲ್ಲ .ಆದರೆ ಅಲ್ಲಿ ಏಳ್ನೂರು ವರ್ಷಗಳಿಂದ ಮಸೀದಿ ಇತ್ತು ಎನ್ನುವುದಕ್ಕೆ ದಾಖಲೆ ಇವೆ ನವೀಕರಣಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿದೆ.