ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜೂನ್ 6ಕ್ಕೆ ಮುಂದೂಡಿದೆ.
ವಿಶ್ವ ಹಿಂದು ಪರಿಷತ್ ಪರವಾಗಿ ಚಿದಾನಂದ ಕೆದಿಲಾಯ ಮತ್ತು ಮಸೀದಿ ಆಡಳಿತ ಮಂಡಳಿಯ ಪರವಾಗಿ ಎನ್ ಪಿ ಶೆಣೈ ವಾದ ಮಂಡಿಸಿದರು .ಮಸೀದಿ ನವೀಕರಣ ಸಂದರ್ಭ ದೇವಾಲಯವನ್ನು ಹೋಲುವ ರಚನೆ ಕಂಡು ಬಂದಿರುವ ಹಿನ್ನೆಲೆ ಯಲ್ಲಿ ಜ್ಞಾನವಾಪಿ ಮಾದರಿಯಲ್ಲಿ ಕೋರ್ಟ್ ಕಮಿಷನರ್ ಮೂಲಕ ಪುರಾತತ್ವ ಇಲಾಖೆಯ ಸಹಾಯದಲ್ಲಿ ಸರ್ವೇ ನಡೆಸಬೇಕೆಂದು ಕೆದಿಲಾಯ ರ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಈ ಪ್ರಕರಣದಲ್ಲಿ ಸರಕಾರವನ್ನು ಕೂಡ 1ಪಕ್ಷ ಕಾರಣನಾಗಿ (ಪಾರ್ಟಿ )ಮಾಡಬೇಕು ಎಂಬುದಾಗಿ ಅರ್ಜಿ ಸಲ್ಲಿಸಿದರು. ಅಲ್ಲದೆ ಈಗಾಗಲೇ ಸ್ಥಳೀಯ ಗ್ರಾಮ ಪಂಚಾಯತ್ ಪಿಡಿಒ ಅವರು ಅನುಮತಿಯನ್ನು ತಡೆ ಹಿಡಿದಿದ್ದಾರೆ ಎಂದು ಹೇಳಿದರು. ಎನ್ ಪಿ ಶೆಣೈ ವಾದ ಮಂಡಿಸಿ ಮಳಲಿಯಲ್ಲಿ ಯಾವ ದೇವರಿದ್ದರೂ ದೇವಸ್ಥಾನ ಇತಿಹಾಸ ಏನು ಎಂಬ ಬಗ್ಗೆ ಅರ್ಜಿದಾರರು ಸಾಕ್ಷ್ಯ ನೀಡಿಲ್ಲ .ಆದರೆ ಅಲ್ಲಿ ಏಳ್ನೂರು ವರ್ಷಗಳಿಂದ ಮಸೀದಿ ಇತ್ತು ಎನ್ನುವುದಕ್ಕೆ ದಾಖಲೆ ಇವೆ ನವೀಕರಣಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.