News Karnataka Kannada
Monday, April 29 2024
ಮಂಗಳೂರು

ಮಹಿಳಾ ಶಿಕ್ಷಣದ ಪ್ರಬಲ ಪ್ರತಿಪಾದಕ ಜ್ಯೋತಿಬಾ ಪುಲೆ; ಸುನಿಲ್ ಕುಮಾರ್ ಬಜಾಲ್

Sfi
Photo Credit : News Kannada

ಮಂಗಳೂರು : ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ, ದೀನ ದಲಿತರ ಏಳಿಗೆಗಾಗಿ ಅವಿಶ್ರಾಂತವಾಗಿ ಶ್ರಮಿಸಿದ ಜ್ಯೋತಿಬಾ ಪುಲೆಯವರು, ಡಾಂಭಿಕ ಆಚರಣೆ,ಗೊಡ್ಡು ಸಂಪ್ರದಾಯ ಹಾಗೂ ಸಂಕುಚಿತ ಭಾವನೆಗಳಿಗೆ ಮರುಳಾಗದೆ ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಜನತೆಗೆ ಕರೆಕೊಟ್ಟವರು.ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಸಾಮಾಜಿಕ ಹೋರಾಟದ ಗುರುವೆಂದೇ ಗುರುತಿಸಲ್ಪಡುವ ಮಹಾತ್ಮ ಜ್ಯೋತಿ ಬಾಪುಲೆಯವರು ಮಹಿಳೆಯರ ಧ್ವನಿಯಾಗಿ, ದಲಿತರ ಉದ್ದಾರಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟು, ಮಹಿಳಾ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಆ ಮೂಲಕ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದರು ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಸಮಾಜದ ಹರಿಕಾರ, ಮಹಿಳಾ ಶಿಕ್ಷಣದ ರುವಾರಿ ಮಹಾತ್ಮ ಜ್ಯೋತಿ ಬಾಪುಲೆಯವರ 195ನೇ ಜನ್ಮದಿನಾಚರಣೆಯ ಅಂಗವಾಗಿ ನಗರದ ವಿಕಾಸ ಕಚೇರಿಯಲ್ಲಿ ಜರುಗಿದ ಶೋಷಿತರ ಪಾಲಿನ‌ ದಿವ್ಯಜ್ಯೋತಿ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಮಾತುಗಳನ್ನು ಹೇಳಿದರು.

ಪೂರಕ ಮಾತುಗಳನ್ನಾಡಿದ ಪ್ರಗತಿಪರ ಚಿಂತಕರಾದ ಡಾ.ಕ್ರಷ್ಣಪ್ಪ ಕೊಂಚಾಡಿಯವರು, ಸಾವಿರಾರು ವರ್ಷಗಳ ಕಾಲ ಭಾರತದ ಸಮಾಜವನ್ನು ಆಳಿದ ಪುರೋಹಿತಶಾಹಿ ವರ್ಗ ಇಲ್ಲಿನ ಮೂಲ ನಿವಾಸಿಗಳನ್ನು ಮೂಲೋತ್ಪಾಟನೆ ಮಾಡಲು ನಡೆಸಿದ ಕುತಂತ್ರ ಮಾರ್ಗವನ್ನು ಜ್ಯೋತಿ ಬಾಪುಲೆಯವರು ಆಳವಾಗಿ ಅಧ್ಯಯನ ನಡೆಸಿರುವುದು ಮಾತ್ರವಲ್ಲದೆ ಪುರಾಣಗಳ ಸ್ರಷ್ಟಿ ಹಾಗೂ ಸುಳ್ಳುಗಳ ಸರಮಾಲೆಯನ್ನು ಪೋಣಿಸಿ ಕೆಳವರ್ಗದ ಜನತೆಯನ್ನು ತನ್ನ ಅಡಿಯಾಳನ್ನಾಗಿಸಿದ ದುಷ್ಕ್ರತ್ಯವನ್ನು ಎಳೆಎಳೆಯಾಗಿ ವಿವರಿಸಿದ್ದಾರೆ.ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದ್ದ ಆ ಕಾಲಘಟ್ಟದಲ್ಲಿ ಪುರೋಗಾಮಿ ಚಿಂತನೆಗಳನ್ನು ಬಿತ್ತುವ ಮೂಲಕ ಸಮಾಜ ಸುಧಾರಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ಜ್ಯೋತಿ ಬಾಪುಲೆಯವರು ಶೋಷಿತ ಸಮುದಾಯದ ಧ್ವನಿಯಾಗಿದ್ದಾರೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ DYFI ಮಂಗಳೂರು ನಗರಾಧ್ಯಕ್ಷರಾದ ನವೀನ್ ಕೊಂಚಾಡಿಯವರು ಮಾತನಾಡುತ್ತಾ, ಜಾತಿ ಧರ್ಮದ ಹೆಸರಿನಲ್ಲಿ ನಿತ್ಯವೂ ಸಂಘರ್ಷಗಳು ನಡೆಯುವ ಪ್ರಸಕ್ತ ಕಾಲಘಟ್ಟದಲ್ಲಿ ಮಹಾತ್ಮ ಜ್ಯೋತಿ ಬಾಪುಲೆಯವರ ಆದರ್ಶಗಳನ್ನು ಮೈಗೂಡಿಸುವ ಮೂಲಕ ಅವರು ಹಾಕಿ ಕೊಟ್ಟ ದಾರಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಹೇಳಿದರು.

ಪ್ರಾರಂಭದಲ್ಲಿ ರಾಧಕ್ರಷ್ಣ ಬೊಂಡಂತಿಲರವರು ಸ್ವಾಗತಿಸಿದರೆ ಕೊನೆಯಲ್ಲಿ ಕ್ರಷ್ಣ ತಣ್ಣೀರುಬಾವಿಯವರು ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು