News Karnataka Kannada
Monday, May 06 2024
ಮಂಗಳೂರು

ಮಾ.7 ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

Ikala
Photo Credit :

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಮಾರ್ಚ್ ೭ ರಂದು ಸೋಮವಾರ ಮಧ್ಯಾಹ್ನ ೧೧ ಗಂಟೆಗೆ ಬಂಟ್ಸ್  ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ.

ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ವಹಿಸಲಿದ್ದಾರೆ.ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ  ಫಲಾನುಭವಿಗಳಿಗೆ  ಚೆಕ್ ಗಳನ್ನು ವಿತರಿಸಲಾಗುವುದು. ಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಎನ್. ಶಶಿ ಕುಮಾರ್,  ಗೌರವಾತ ಅತಿಥಿಯಾಗಿ ಮುಂಬಯಿ ವಿ.ಕೆ.ಗ್ರೂಪ್ ನ ಚೆಯರ್ ಮೆನ್ ಕೆ.ಎಂ. ಶೆಟ್ಟಿ ಮಧ್ಯಗುತ್ತು ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ, ರಾಷ್ಟ್ರಪತಿಗಳ ಸೇವಾ ಪದಕ  ಪುರಸ್ಕೃತ ವಿಜಯ ಕಾಂಚನ್ ಬೈಕಂಪಾಡಿ, ಸಂಸ್ಕಾರ ಭಾರತಿ ಮಂಗಳೂರು ಇದರ ಅಧ್ಯಕ್ಷ ಕೆ ಪುರುಷೋತ್ತಮ ಭಂಡಾರಿ ಅಡ್ಯಾರ್,  ದ.ಕ.ಜಿಲ್ಲಾ ಕಾರ್ಯರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀವಾಸ ನಾಯಕ್ ಇಂದಾಜೆ, ಹಿರಿಯ ಪತ್ರಕರ್ತರಾದ ಕೆ. ಆನಂದ ಶೆಟ್ಟಿ, ಪಿ.ಬಿ.ಹರೀಶ್ ರೈ,
ಕರ್ನಾಟಕ ಅರಣ್ಯ ಸಂರಕ್ಷಣ ಅಧಿಕಾರಿ (ಎಸಿಎಫ್) ಹಸ್ತಾ ಶೆಟ್ಟಿ, ಪಿಎಚ್ ಡಿ ಪದವಿ ಪಡೆದ ಡಾ.ಪ್ರಿಯಾ ಹರೀಶ್ ಶೆಟ್ಟಿ, ಡಾ.ಮಂಜುಳಾ ಶೆಟ್ಟಿ ಅವರನ್ನು ಸನ್ಮಾಸಲಾಗುವುದು.

ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ,  ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್ ಉಪಸ್ಥಿತರಿರುವರು. ಸಭೆಯಲ್ಲಿ ವಲಯ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು