ಮಂಗಳೂರು

ಮುಂಡಾಜೆ ಆಸುಪಾಸಿನ ಗ್ರಾಮಗಳಲ್ಲಿ ಒಂಟಿ ಸಲಗ ಸಂಚಾರ: ತೋಟಕ್ಕೆ ಹಾನಿ

ಬೆಳ್ತಂಗಡಿ : ತಾಲೂಕಿನ ಮುಂಡಾಜೆ ಆಸುಪಾಸಿನ ಚಿಬಿದ್ರೆ, ತೋಟತ್ತಾಡಿ, ಕಡಿರುದ್ಯಾವರ, ಗ್ರಾಮಗಳಲ್ಲಿ ಗುರುವಾರ ಹಾಗೂ ಶುಕ್ರವಾರ ರಾತ್ರಿ ಒಂಟಿ ಸಲಗ ಸಂಚಾರ ನಡೆಸಿದೆ. ಕಡಿರುದ್ಯಾವರ ಗ್ರಾಮದ ಹೇಡ್ಯ ಸಮೀಪದ ಲಿಜೋ ಎಂಬವರ ತೋಟದಲ್ಲಿ ಫಲಬರುವ 5 ತೆಂಗಿನ ಮರಗಳನ್ನು ಒಂಟಿ ಸಲಗ ಮುರಿದು ಹಾಕಿದೆ.

ಗುರುವಾರ ರಾತ್ರಿ ತೋಟತ್ತಾಡಿ,ಚಿಬಿದ್ರೆ ಮಾಕಳ ಮೊದಲಾದ ಪ್ರದೇಶಗಳಲ್ಲಿ ಸಂಚಾರ ನಡೆಸಿದ ಕಾಡಾನೆ, ಬಳಿಕ ಇಲ್ಲಿಯ ಖಾಸಗಿ ನರ್ಸರಿಯೊಂದರಲ್ಲಿ ಸಂಚರಿಸಿ ರಾಷ್ಟ್ರೀಯ ಹೆದ್ದಾರಿ ಮೂಲಕ ಹೋಗಿ ಮೃತ್ಯುಂಜಯ ನದಿದಾಟಿ ನಳೀಲು ಕಡೆ ಹೋಗಿರುವ ಕುರುಹುಗಳು ಪತ್ತೆಯಾಗಿದ್ದವು.

ಶುಕ್ರವಾರ ಕಡಿರುದ್ಯಾವರ ಗ್ರಾಮದ ಹೇಡ್ಯ, ಜೋಡುನೆರಳು ಮೊದಲಾದ ಪ್ರದೇಶಗಳಲ್ಲಿ ಸಂಚರಿಸಿ ಬಳಿಕ ಲಿಜೋ ಅವರ ತೋಟಕ್ಕೆ ನುಗ್ಗಿ ಹಾನಿ ಉಂಟುಮಾಡಿದೆ. ಫೆಬ್ರವರಿ ಹಾಗೂ ಮಾರ್ಚ್ ಪ್ರಥಮ ವಾರ ಮುಂಡಾಜೆ ಪ್ರದೇಶದ ದುಂಬೆಟ್ಟುವಿನಲ್ಲಿ ಸತತ 18 ದಿನಗಳ ಕಾಲ ಕಾಡಾನೆ ತೋಟಗಳಿಗೆ ನುಗ್ಗಿ ಕೃಷಿ ಹಾನಿ ಉಂಟುಮಾಡಿತ್ತು.

ಕಾಡಾನೆಗಳ ಉಪಟಳ ಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆಯ ಡಿ.ಎಫ್.ಒ ಡಾ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಾಗರಹೊಳೆಯಿಂದ ಪರಿಣಿತ ಆನೆ ಕಾವಾಡಿಗರನ್ನು ಕರೆಸಿತ್ತು.ಅವರು ಆಗಮಿಸಿದ ಬಳಿಕ ಇಲ್ಲಿನ ಯಾವುದೇ ಗ್ರಾಮಗಳಲ್ಲಿ ಕಾಡಾನೆ ಸಂಚಾರ ಕಂಡುಬಾರದ ಕಾರಣ ಒಂದು ವಾರ ಇಲ್ಲಿನ ಅರಣ್ಯ ಪ್ರದೇಶಗಳಲ್ಲಿ ಸುತ್ತಾಟ ನಡೆಸಿ ಆನೆಗಳ ಜಾಡು ಕಂಡುಬರದ ಕಾರಣ ಹಿಂದಿರುಗಿದ್ದರು. ಅವರು ಮರಳಿದ 10 ದಿನಗಳ ಬಳಿಕ ಕಾಡಾನೆ ಮತ್ತೆ ಕಂಡುಬಂದಿದೆ

Gayathri SG

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

11 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

21 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

26 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

34 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

43 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

47 mins ago