ಬೆಳ್ತಂಗಡಿ; ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಮುಂಡೂರು ಗ್ರಾಮದ ಪರನೀರು ನಿವಾಸಿ ಚೆನ್ನಪ್ಪ ಬಂಗೇರ(55)ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮಾನಸಿಕವಾಗಿ ನೊಂದಿದ್ದ ಅವರು ಮದ್ಯದ ಚಟ ಹೊಂದಿದ್ದರು. ಮನೆಯಲ್ಲಿಯೇ ವಿಷ ಸೇವಿಸಿದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.ಇವರ ಮಗ ಚರಣ್ ರಾಜ್ ನೀಡಿರುವ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.