ಬೆಳ್ತಂಗಡಿ : ರಾಜ್ಯದಲ್ಲಿ ಬಿಜೆಪಿ ಸರಕಾರದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು.
ಅವರು ಬೆಳ್ತಂಗಡಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಸ್ಥಿರ ಸರಕಾರ ಬೇಕು ಎಂಬುದು ಜನರ ಬಯಕೆ ಎರಡು ಬಾರಿ ಅಧಿಕಾರಕ್ಕೆ ಬಂದಾಗಲೂ ಬಿಜೆಪಿಗೆ ಸ್ಥಿರ ಸರಕಾರ ನೀಡಲು ಸಾಧ್ಯವಾಗಿಲ್ಲ. ಯಾವೂದೇ ಕಾರ್ಯಕ್ರಮಗಳಿಲ್ಲದ ಈ ಸರಕಾರ ಜನರಿಗೆ ಸಾಕಾಗಿದೆ ಯಾವಾಗ ಈ ಸರಕಾರ ಒಮ್ಮೆ ಹೋಗುತ್ತದೆ ಎಂದು ಜನ ಕಾಯುತ್ತಿದ್ದಾರೆ ಎಂದ ಅವರು ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಕಾರ್ಯವನ್ನು ಗ್ರಾಮೀಣ ಮಟ್ಟದಿಂದ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಸಂವಿಧಾನಕ್ಕೆ ಅನುಗುಣವಾಗಿ ಸರಕಾರ ನಡೆಯುತ್ತಿಲ್ಲ. ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಘಟನೆ ಖಂಡನೀಯ ಈ ವಿಚಾರವೂ ಸೇರಿದಂತೆ ಸರಕಾರದ ವಿಫಲತೆಯ ಬಗ್ಗೆ ಮುಂದಿನ ದಿನಗಳಲ್ಲಿ ಸದಸನದಲ್ಲಿ ಕಾಂಗ್ರೆಸ್ ಪಕ್ಷ ದ್ವನಿಯೆತ್ತಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್, ಪಕ್ಷದ ಮುಖಂಡರುಗಳಾದ ಮನೋಹರ್ ಕುಮಾರ್, ಶೇಖರ ಕುಕ್ಕೇಡಿ, ಅಬ್ದುಲ್ ರಹಿಮಾನ್ ಪಡ್ಪು, ಅಶ್ರಫ್ ನೆರಿಯ ಬಿ.ಕೆ ವಸಂತ್, ಚಂದು ಎಲ್, ಭರತ್ ಕುಮಾರ್, ಉಷಾ ಶರತ್, ಜೆಸ್ಸಿಂತಾ ಮೋನಿಸ್, ಜಗದೀಶ್ ಡಿ, ಹಾಗೂ ಇತರರು ಇದ್ದರು.