Categories: ಮಂಗಳೂರು

ಮೂಡುಬಿದಿರೆ: ಜ.24ರಂದು ʼರಾಷ್ಟ್ರೀಯ ಹೆಣ್ಣುಮಗು ದಿನಾಚರಣೆ’

ಮೂಡುಬಿದಿರೆ: “ಬೇಟಿ ಬಚಾವೋ, ಬೇಟಿ ಪಡಾವೋ” ಪರಿಕಲ್ಪನೆಯಡಿ ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲದ ಹಿರಿಯ ನಾಗರಿಕರ ಪ್ರಕೋಷ್ಠದ ವತಿಯಿಂದ ʼರಾಷ್ಟ್ರೀಯ ಹೆಣ್ಣು ಮಗುವಿನ ದಿನʼ ಜ. 24ರಂದು ಬೆಳುವಾಯಿಯ ಎಸ್.ಬಿ. ಪಾರ್ಟಿ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ನಾಗರಿಕರ ಪ್ರಕೋಷ್ಠ ಸಂಚಾಲಕ ಸುರೇಶ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ 12 ಮಂದಿ ಬಡ ಹೆಣ್ಣುಮಕ್ಕಳಿಗೆ ತಲಾ 1000 ರೂ. ಮೌಲ್ಯದ ಸ್ಥಿರ ಠೇವಣಿ ಸರ್ಟಿಫಿಕೇಟ್ (10 ವರ್ಷ ಅವಧಿ) ನೀಡಲಾಗುವುದು. ಅನಾರೋಗ್ಯ ಪೀಡಿತ ಹುಡುಗಿಯೊಬ್ಬಳಿಗೆ ಆರ್ಥಿಕ ನೆರವು ಹಸ್ತಾಂತರಿಸಲಾಗುವುದು. ರಾಷ್ಟ್ರಮಟ್ಟದ ಸಾಧಕ ಕ್ರೀಡಾಪಟು ಅಮ್ರೀನ್ ಅವರಿಗೆ ಸನ್ಮಾನ ನಡೆಯಲಿದೆ. `ಹೆಣ್ಣು ಮಗುವಿನ ಉಳಿವು’ ಪ್ರಸ್ತುತ ಕಾಲದ ಅವಶ್ಯಕತೆ ಎಂಬ ವಿಷಯದ ಕುರಿತು ಕಾರ್ಕಳ ಎಸ್.ವಿ.ಟಿ. ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ ಉಪನ್ಯಾಸ ನೀಡಲಿದ್ದಾರೆ.

ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಲಿದ್ದು, ಹಿರಿಯ ನಾಗರಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಹಿರಿಯ ನಾಗರಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ನಾರಾಯಣ ಗಟ್ಟಿ, ಬೆಳುವಾಯಿ ಗ್ರಾಪಂ ಅಧ್ಯಕ್ಷೆ ಸುಶೀಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಪ್ರಕೋಷ್ಠ ಸದಸ್ಯ ರಾಘವ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Sneha Gowda

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

18 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

33 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

48 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

52 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

2 hours ago