ಬಂಟ್ವಾಳ: ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವೇಳೆ ನಾಲ್ಕನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ವಿಹಿಂಪ ಭಜರಂಗದಳದ ಕಾರ್ಯಕರ್ತ ವಿಜಯ್ ಪುಣ್ಕೆದಡಿ ಅವರ ಮನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯಿಂದ ಸಿಗುವ ಪರಿಹಾರವನ್ನು ನೀಡುತ್ತೇವೆ. ಜೊತೆಗೆ ಬಿಜೆಪಿ ಕ್ಷೇಮ ನಿಧಿಯಿಂದ ನೆರವು ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷೆನಾಗವೇಣಿ, ಸದಸ್ಯರಾದ ಕಾಂತಪ್ಪ ಪೂಜಾರಿ, ಪುರುಷೋತ್ತಮ ಮಜಲು, ಪ್ರಮುಖರಾದ ಪ್ರಕಾಶ್ ಅಂಚನ್, ಅಶೋಕ್ ಶೆಟ್ಟಿ ಸರಪಾಡಿ, ನಾರಾಯಣ ಪೂಜಾರಿ ಬೊಳ್ಳುಕಲ್ಲು, ಪೂವಪ್ಪ ಪೂಜಾರಿ, ಅಭಿಷೇಕ್ ಸುವರ್ಣ, ಸಂಜೀವ ಪೂಜಾರಿ ತಿಂಗಳಾಡಿ, ಸೀತಾರಾಮ ಪೂಜಾರಿ ತಿಂಗಳಾಡಿ, ತಿಲಕ್ ಬಂಗೇರ, ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.