ಮಂಗಳೂರು: ಕಳೆದ ದಿನ(ಅ.26) ಮೆಲ್ಕಾರ್ ನಲ್ಲಿ ಚೂರಿ ಇರಿತ ಪ್ರಕರಣ ನಡೆದಿದ್ದು ಮೂವರಿಗೆ ಗಾಯವಾಗಿದೆ.
ಹುಲಿ ವೇಷ ಹಾಕುವ ಎರಡು ತಂಡಗಳ ನಡುವೆ ಎರಡು ದಿನಗಳ ಹಿಂದೆ ಶಾರದೋತ್ಸವ ವೇಳೆ ಗಲಾಟೆ ನಡೆದಿತ್ತು. ಈ ಗಲಾಟೆ ಮುಂದುವರಿದಿದ್ದು, ನಿನ್ನೆ ರಾತ್ರಿ ಇತ್ತಂಡಗಳ ನಡುವೆ ಜಗಳವಾಗಿದೆ. ಈ ವೇಳೆ ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುಗಳಿಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.