News Karnataka Kannada
Monday, May 06 2024
ಮಂಗಳೂರು

ಮೇ ೧ರಂದು ಸುರತ್ಕಲ್ ಬಂಟರ ಭವನನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Untitled 102
Photo Credit :

ಸುರತ್ಕಲ್ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಸಂಸ್ಥೆ ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ವಿಜಯ್ ಪಾಲಿಕ್ಲಿನಿಕ್ ಆಂಡ್ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ವಿಜಯ್ ಮೆಡಿಕಲ್ಸ್ ಸುರತ್ಕಲ್ ಇವರ ಸಹಯೋಗದಲ್ಲಿ ಮೇ ೧ ರಂದು ಭಾನುವಾರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ ರ ವರೆಗೆ ಸುರತ್ಕಲ್ ಬಂಟರ ಭವನದಲ್ಲಿ ಖ್ಯಾತ ೧೭ ಮಂದಿ ವೈದ್ಯರುಗಳ ನೇತೃತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ.

ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ ವಿಜಯ್ ಎಂ ಬುದ್ನಾರ್, ಡಾ ರಾಹುಲ್ ರಾವ್ ಭಾಗವಹಿಸಲಿದ್ದಾರೆ. ವಿಜಯ ಮೆಡಿಕಲ್ಸ್ ನ ಮಾಲಕರಾದ ದಯಾನಂದ ಡಿ ಶೆಟ್ಟಿ, ವೈದ್ಯಕೀಯ ಸಮಿತಿಯ ಸಂಚಾಲಕ ಪ್ರತಾಪ್ ಶೆಟ್ಟಿ ಉಪಸ್ಥಿತರಿರುವರು.

ರಕ್ತದೊತ್ತಡ, ಮಧುಮೇಹ, ಸ್ತ್ರೀರೋಗ, ಚರ್ಮರೋಗ, ಎಲುಬು, ಜಠರ, ಪಿತ್ತಕೋಶ, ಅರ್ಬುದ (ಕ್ಯಾನ್ಸರ್) ಎಂಡೋಸ್ಕೋಪಿ, ಮೈಕ್ರೋಸ್ಕೋಪಿ, ನರಸಂಬಂಧಿ, ಮನೋರೋಗ, ಮೂತ್ರಕೋಶದ ಕಾಯಿಲೆ, ಹಾಗೂ ಮಕ್ಕಳ ಕಾಯಿಲೆಗಳ ತಪಾಸಣೆಯನ್ನು ಶಿಬಿರದಲ್ಲಿ ಮಾಡಲಾಗುವುದು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ  ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು