ಮಂಗಳೂರು: ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಯುವಕ ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಭಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶ್ ಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್ ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…