News Karnataka Kannada
Monday, April 29 2024
ಮಂಗಳೂರು

ರಥ ಬೀದಿ ಕಾಲೇಜು ಹಿಜಾಬ್ ವಿವಾದ: ಉನ್ನತ ಮಟ್ಟದ ತನಿಖೆ ನಡೆಸಬೇಕು- ಯು.ಟಿ. ಖಾದರ್

Ut Khadar
Photo Credit :

ಮಂಗಳೂರು, ಮಾ.5 : ರಥ ಬೀದಿ ಕಾಲೇಜಿನ ಹಿಜಾಬ್ ವಿವಾದಕ್ಕೆ ಜಿಲ್ಲಾಧಿಕಾರಿಯವರು ಉನ್ನತ ಅಧಿಕಾರಿಗಳ ಮೂಲಕ ತನಿಖೆ ನಡೆಸಿ ಕ್ರಮ ವಹಿಸಬೇಕು. ಅಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ದಬ್ಬಾಳಿಕೆಗೆ ಸಂಬಂಧಿಸಿ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಕಾನೂನು ಪ್ರಕಾರ ಕ್ರಮ ವಹಿಸಬೇಕು.

ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶದ ವರದಿ ನೀಡಬೇಕು ಎಂದು ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಆಗ್ರಹಿಸಿದ್ದಾರೆ.

ಕಾಲೇಜಿನಲ್ಲಿ ಮಕ್ಕಳ ಗಲಾಟೆಯನ್ನು ಜಿಲ್ಲಾಡಳಿತ ಸುಮ್ಮನೆ ಕುಳಿತು ನೋಡುವುದೇ ಎಂದು ಪ್ರಶ್ನಿಸಿದ ಯು.ಟಿ.ಖಾದರ್, ವಿದ್ಯಾರ್ಥಿನಿಯರಿಗೆ ಈ ರೀತಿ ಅಗೌರವ ತೋರುವುದು ಸರಿಯೇ ಎಂದು ಪ್ರಶ್ನಿಸಿದರು.

ಮೀನಿನ ವ್ಯಾಪಾರಿ ಮೇಲೆ ನಡೆದ ಹಲ್ಲೆ ಪ್ರಕರಣದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯು.ಟಿ.ಖಾದರ್, ಪೊಲೀಸ್ ಇಲಾಖೆ ಮೇಲೆ ಭಯ ಇಲ್ಲದಾಗ ಇಂತಹ ಗೂಂಡಾ ಪ್ರವೃತ್ತಿ, ದರೋಡೆ ಕಾರ್ಯ ಹೆಚ್ಚಾಗುತ್ತದೆ. ಇದನ್ನು ಪೊಲೀಸರು ಮಟ್ಟ ಹಾಕಬೇಕು. ಗೂಂಡಾಗಳು, ದರೋಡೆಕೋರರು ಯಾರೇ ಆಗಿದ್ದರೂ ಅವರನ್ನು ಬಂಧಿಸಿ ಶಿಕ್ಷೆ ನೀಡುವಾಗ ಯಾರೂ ಮಧ್ಯ ಪ್ರವೇಶಿಸುವುದಿಲ್ಲ. ಈ ಕಾರ್ಯ ಮಾಡುವುದು ಸ್ಥಳೀಯ ಪೊಲೀಸ್ ಠಾಣಾ ಅಧಿಕಾರಿಗಳ ಜವಾಬ್ದಾರಿ ಎಂದು ಹೇಳಿದರು.

ಯುಕ್ರೇನ್‌ನಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗುವ ಮುಂಚಿತವಾಗಿಯೇ ಅಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮಾಡುವಲ್ಲಿ ಕೇಂದ್ರ ಸರಕಾರ ವಿಫಲವಾದ ಕಾರಣವೇ ವಿದ್ಯಾರ್ಥಿ ನವೀನ್‌ನನ್ನು ನಾವು ಕಳೆದುಕೊಳ್ಳಬೇಕಾಯಿತು ಎಂದು ಯು.ಟಿ.ಖಾದರ್ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಯುಕ್ರೇನ್‌ನಲ್ಲಿ ಮೃತಪಟ್ಟಿರುವ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ ಆತನ ಶಿಕ್ಷಣಕ್ಕಾಗಿ ಪಾವತಿಸಲಾದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಬೇಕು ಎಂದು ಅವರು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು