News Karnataka Kannada
Wednesday, May 01 2024
ಮಂಗಳೂರು

ರಮಾನಾಥ್ ರೈ ಅವರ ತೇಜೋವಧೆ ಸಹಿಸುವುದಿಲ್ಲ : ಎಮ್. ಸಿ. ಪೂಜಾರಿ

New Project 2021 09 18t180544.394
Photo Credit :

ಬಂಟ್ವಾಳ : ಬಂಟ್ವಾಳ ಕ್ಷೇತ್ರ ಸಹಿತ ಜಿಲ್ಲೆಯಲ್ಲಿ ಯಾವುದೇ ಕೃತ್ಯ ನಡೆದಾಗ ಅದರಲ್ಲಿ ಮಾಜಿ ಸಚಿವ ರಮಾನಾಥ ರೈ ಅವರ ಹೆಸರನ್ನು ಎಳೆತಂದು ಅಪಪ್ರಚಾರ ಮಾಡುವ ಕಾರ್ಯ ನಡೆಯುತ್ತಿದ್ದು ಇದು ಖಂಡನೀಯ ಎಂದು  ದ.ಕ.ಜಿಲ್ಲಾ ಕಾಂಗ್ರೆಸ್ ನ ಪ್ರ.ಕಾರ್ಯದರ್ಶಿ, ಬಿ.ಸಿ.ರೋಡಿನ ನೋಟರಿ,ವಕೀಲ ಎಂ.ಚಂದ್ರಶೇಖರ ಪೂಜಾರಿ ಹೇಳಿದ್ದಾರೆ.

ಶನಿವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕ್ಷುಲ್ಲಕ ವಿಚಾರಕ್ಕು ರೈಯವರ ಹೆಸರನ್ನು ಥಳಕು ಹಾಕಿ ಅವರನ್ನು ತೇಜೋವಧೆ ಮಾಡುವ ಪ್ರಯತ್ನ ನಡೆಸಿದರೆ ಕಾಂಗ್ರೆಸ್ ಪಕ್ಷ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ತೈಲ,ಗ್ಯಾಸ್ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದು,ಬೆಲೆ ಏರಿಕೆಯನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದ ಅವರು ದೇಶದ ಆರ್ಥಿಕ ಪರಿಸ್ಥಿತಿಯು ಪತನದ ಅಂಚಿಗೆ ತಲುಪಿದೆ ಎಂದು ವಾಗ್ದಾಳಿ ನಡೆಸಿದರು. ದೇಶದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಯುವಜನರು,ವಿದ್ಯಾವಂತರು ಪರದಾಡುತ್ತಿದ್ದಾರೆ.2 ಕೋಟಿ ಉದ್ಯೋಗ ಸೃಷ್ಠಿಸುವ ಭರವಸೆ ನೀಡಿದ್ದ ಕೇಂದ್ರ ಸರಕಾರ ಎಲ್ಲಿ ಉದ್ಯೋಗ ಸೃಷ್ಟಿ ಮಾಡಿದೆ ಎಂದುಪೂಜಾರಿ ಪ್ರಶ್ನಿಸಿದರು.

ದೇವಸ್ಥಾನ,ದೈವಸ್ಥಾನ,ಧಾರ್ಮಿಕ ಕೇಂದ್ರವನ್ನು ನೆಲಸಮ ಮಾಡುವ ಮೂಲಕ ರಾಜ್ಯ ಸರಕಾರಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ.ಇದಕ್ಕೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತಿದೆ.ಕಾಂಗ್ರೆಸ್ ಸರಕಾರ ಇದ್ದಾಗಲು ಸು.ಕೋ.ಆದೇಶ ಕೊಟ್ಟಿದ್ದರೂ ಕಾಂಗ್ರೆಸ್ ದೇವಸ್ಥಾನವನ್ನು ತೆರವುಗೊಳಿಸುವಂತ ಕೆಲಸ ಮಾಡದೆ ಅದರ ರಕ್ಷಣೆ ಮಾಡಿತ್ತು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಬೂಡಾ ಮಾಜಿ ಅಧ್ಯಕ್ಷಸದಾಶಿವ ಬಂಗೇರ,ಪ್ರಮುಖರಾದ ಚಿತ್ತರಂಜನ್
ಶೆಟ್ಟಿ,ಜಗನ್ನಾಥ್ ತುಂಬೆ, ಲೋಕೇಶ್ , ವೆಂಕಪ್ಪ ಪೂಜಾರಿ ಮೊದಲಾದವರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು