ಬಂಟ್ವಾಳ: ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದ್ದು, ರಾಜ್ಯವ್ಯಾಪಿ ನಿರಂತರವಾಗಿ ಹಾಗೂ ಗುಣಮಟ್ಟದ ವಿದ್ಯುತ್ ನೀಡಬೇಕು, ಸರಬರಾಜಿನಲ್ಲಿ ಎಲ್ಲಿಯೂ ಕೊರತೆಯಾಗಬಾರದು ಎಂಬ ನಿಟ್ಟಿನಲ್ಲಿ ಸಬ್ ಸ್ಟೇಷನ್ ಗಳನ್ನು ಹೆಚ್ಚು ಹೆಚ್ಚು ನಿರ್ಮಾಣ ಮಾಡುತ್ತಿದ್ದೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ಬಂಟ್ವಾಳದ ವಿದ್ಯಾಗಿರಿಯ ಅರ್ಬಿಗುಡ್ಡೆ ಎಂಬಲ್ಲಿ 33/11 ಕೆ.ವಿ. ಗ್ಯಾಸ್ ಇನ್ಸುಲೇಟೆಡ್ ವಿದ್ಯುತ್ ಉಪಕೇಂದ್ರದ ಉದ್ಘಾಟನೆ ನಡೆಸಿ ಮಾಧ್ಯಮ ದವರ ಜೊತೆ ಮಾತನಾಡಿದರು.
ಕಳೆದ 7 ವರ್ಷಗಳ ಬಳಿಕ
ಕರ್ನಾಟಕದಲ್ಲಿ 5020 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಿದೆ. ರಾಯಚೂರು ಮತ್ತು ಬಳ್ಳಾರಿಯ ಎಲ್ಲಾ ಯುನಿಟ್ ಗಳು ಕಾರ್ಯರಂಭವಾಗಿದೆ ಎಂದ ಅವರು,ಕಲ್ಲಿದ್ದಲಿನ ನಿರಂತರವಾದ ಸರಬರಾಜು ಆಗುವ ಕಾರಣಕ್ಕಾಗಿ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ವಿದ್ಯುತ್ ಸರಬರಾಜು ಆಗುತ್ತಿದೆ, ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ನಿರ್ವಹಣೆ ಯನ್ನು ಚೆನ್ನಾಗಿ ಮಾಡಿದ್ದಾರೆ ಎಂದರು.
ನಾಲ್ಕು ಉಪಕೇಂದ್ರಗಳು ಆರಂಭ
ಕೇಂದ್ರದ ಶೇ.60 ಹಾಗೂ ಮೆಸ್ಕಾಂ ನ ಶೇ.40. ಪರ್ಸೆಂಟ್ ವೆಚ್ಚದೊಂದಿಗೆ ಎರಡು ಜಿಲ್ಲೆಗಳಲ್ಲಿನಾಲ್ಕು ಇನ್ಸುಲೇಟೆಡ್ ಉಪಕೇಂದ್ರಗಳನ್ನು ಆರಂಭಮಾಡಿದ್ದೇವೆ. ಬಂಟ್ವಾಳ, ಉರ್ವ, ಕೋಟ, ಉದ್ಯಾವರ ನಾಲ್ಕು ಕಡೆಗಳಲ್ಲಿ 39 ಕೋಟಿ ವೆಚ್ಚದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನಾಲ್ಕರಲ್ಲಿ ಪ್ರಥಮವಾಗಿ ಬಂಟ್ವಾಳ ದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಉಪಕೇಂದ್ರದ ಉದ್ಘಾಟನೆ ನಡೆದಿದೆ. ಬಂಟ್ವಾಳದ ಸುತ್ತ ಮುತ್ತಲಿನ ಪರಿಸರದ ಸುಮಾರು 14 ಸಾವಿರ ಮನೆಗಳಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ನೀಡಲು ಅನುಕೂಲವಾಗಿದೆ.
ಸಿಬ್ಬಂದಿ ನೇಮಕಾತಿ ಪ್ರಗತಿಯಲ್ಲಿ
ಇಲಾಖೆಯಲ್ಲಿ ಹೊಸದಾಗಿ 899 ಮಂದಿ ಹೊಸ ನೇಮಕಾತಿ ಮಾಡಿದೆ, ಹೊಸದಾಗಿ 600 ಕ್ಕೂ ಅಧಿಕ ಜನರ ನೇಮಕಾತಿ ಆರಂಭವಾಗಿದೆ. ಕೊರತೆಯಿರುವ ಕಡೆಗಳಲ್ಲಿ ತೆಗದುಕೊಳ್ಳುವ ಕೆಲಸ ಪ್ರಾರಂಭ ಮಾಡಿದ್ದೇವೆ. ಹೊಸ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, 1500 ಜನರಿಗೆ ಕೆ.ಪಿ.ಟಿ.ಸಿ.ಎಲ್ ಮುಖಾಂತರ ನೇಮಕಾತಿ ಗಾಗಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಮುಂದಿನ ಜೂನ್ ತಿಂಗಳ ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪವರ್ ಮ್ಯಾನ್ ಗಳಿಗೆ ಇದ್ದ 20 ಲಕ್ಷ ಜೀವ ವಿಮೆಯನ್ನು ,ನಾನು ಬಂದ ಅದನ್ನು 40 ಲಕ್ಷಕ್ಕೆ ಏರಿಸಿದ್ದೇನೆ ಎಂದು ಅವರು ತಿಳಿಸಿದರು. ವಿದ್ಯುತ್ ಚಾರ್ಜಿಂಗ್ ಸೆಂಟರ್ ಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಕೆಲಸ ಪ್ರಾರಂಭವಾಗಿದೆ. ಜೂನ್ ಮೊದಲನೇ ವಾರದಲ್ಲಿ ಇಡೀ ರಾಜ್ಯದಲ್ಲಿ ವಿದ್ಯುತ್ ಚಾರ್ಜಿಂಗ್ ಸೆಂಟರ್ ಅಭಿಯಾನಕ್ಕೆ ದಿನ ನಿಗದಿ ಮಾಡುತ್ತೇವೆ. ಒಂದು ಸಾವಿರ ಚಾರ್ಜಿಂಗ್ ಸೆಂಟರ್ ಮಾಡುವ ಯೋಜನೆ ಮಾಡಿದ್ದೇವೆ. ಮೆಸ್ಕಾಂ ಇದಕ್ಕೆ ನೊಡಲ್ ಅಧಿಕಾರಿಯಾಗಿ ಮಾಡಿ ಟೆಂಡರ್ ಪ್ರಕ್ರಿಯೆ ಆರಂಭಮಾಡುತ್ತೇವೆ ಎಂದು ಅವರು ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಎಂ.ಐ.ಇಇ ಅದ್ಯಕ್ಷ ಸಂತೋಷ್ ಕುಮಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಒಳಚರಂಡಿ ನಿಗಮದ ನಿರ್ದೇಶಕಿ ಸುಲೋಚನ ಭಟ್, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ,ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯ ಗಂಗಾದರ ಪೂಜಾರಿ, ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿ ಅರಳ, ಪುರಸಭಾ ಸದಸ್ಯ ಹರಿಪ್ರಸಾದ್, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಮಾಜಿ ತಾ.ಪಂ.ಸದಸ್ಯ ಗಣೇಶ್ ಸುವರ್ಣ, ಪ್ರಮುಖರಾದ ಮಹೇಶ್ ತುಪ್ಪೆಕಲ್ಲು, ಪುಷ್ಪರಾಜ್ ಚೌಟ, ಸುಕೇಶ್ ಚೌಟ, ಸೀಮಾ ಮಾಧವ, ಪುರುಷೋತ್ತಮ ಶೆಟ್ಟಿ, ಉದಯಕುಮಾರ್ ರಾವ್, ಗಣೇಶ್ ದಾಸ್, ಡೊಂಬಯ ಅರಳ, ಮಹೇಶ್ ಶೆಟ್ಟಿ, ಕೇಶವ ದೈಪಲ,ನಂದರಾಮ ರೈ, ಯಶೋಧರ ಕರ್ಬೆಟ್ಟು, ದ.ಕ.ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ತಹಶೀಲ್ದಾರ್ ಡಾ.ಸ್ಮಿತಾ ರಾಮು , ಮೆಸ್ಕಾಂ ಎಂ.ಡಿ.ಪ್ರಶಾಂತ್ ಕುಮಾರ್ ಮಿಶ್ರ, ತಾಂತ್ರಿಕ ನಿರ್ದೇಶಕಿ ಪದ್ಮಾವತಿ, ಚೀಪ್ ಇಂಜಿನಿಯರ್ ಹರೀಶ್ , ಅಧೀಕ್ಷಕ ಇಂಜಿನಿಯರ್ ಕೃಷ್ಣ ರಾಜ್, ಇ.ಇ.ಪ್ರಶಾಂತ್ ಪೈ, ಪಿ.ಆರ್.ಒ.ವಸಂತ ಶೆಟ್ಟಿ, ಬಂಟ್ವಾಳ ಎ.ಇ.ಇ.ನಾರಾಯಣ ಭಟ್, ಪುತ್ತೂರು ಇ.ಇ.ರಾಮಚಂದ್ರ, ಬೆಳ್ತಂಗಡಿ ಎ.ಇಇ.ಶಿವಶಂಕರ್ ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ನಗರ ಠಾಣಾ ಎಸ್. ಐ. ಅವಿನಾಶ್ ಎಚ್. ಗೌಡ ಮತ್ತಿತರರು ಉಪಸ್ಥಿತರಿದ್ದರು.