News Karnataka Kannada
Monday, April 29 2024
ಮಂಗಳೂರು

ರಾಜ್ಯ ಸರಕಾರದ ಪಠ್ಯ‌ ಪುಸ್ತಕದಲ್ಲಿ ಸ್ತ್ರೀಯರಿಗೆ ಅವಮಾನ

Janaspandana Sabha at Keravadi, lays foundation stone for works worth Rs 2 crore
Photo Credit :

ಪುತ್ತೂರು: ರಾಜ್ಯ ಸರಕಾರ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲು ಸಂಪೂರ್ಣ ವಿಫಲವಾಗಿದ್ದು, ಪಠ್ಯ ಪುಸ್ತಕದಲ್ಲಿ ಸ್ತ್ರೀಯರಿಗೆ ಅನ್ಯಾಯ ಮಾಡಲಾಗಿದೆ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಆರೋಪಿಸಿದರು.

ಪುತ್ತೂರು ಪ್ರೆಸ್‌ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ರೋಹಿತ್ ಚಕ್ರವರ್ತಿಯಂತಹ ವ್ಯಕ್ತಿಯನ್ನು ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವ ಬಿಜೆಪಿ ಸರಕಾರ ಆರ್.ಎಸ್.ಎಸ್ ನ ಸಿದ್ಧಾಂತಗಳನ್ನು ವಿದ್ಯಾರ್ಥಿಗಳ ತಲೆಗೆ ತುಂಬಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದ ಅವರು ಪಠ್ಯ ಪುಸ್ತಕ ಸಮಿತಿಯ ಈ ಗೊಂದಲದಿಂದಾಗಿ ವಿದ್ಯಾರ್ಥಿಗಳಿಗೆ ಪಾಠ ಪುಸ್ತಕವನ್ನೇ ನೀಡಲಾಗಿಲ್ಲ.

ವಿದ್ಯಾರ್ಥಿಗಳ ಪಾಠ,ಪ್ರವಚನಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಅವರು ಹೆಸರಾಂತ ಸಾಹಿತಿಗಳ‌ ಪಠ್ಯಗಳನ್ನು ಪಾಠ ಪುಸ್ತಕದಿಂದ ತೆಗೆಯುವ ಮೂಲಕ ಸಾಹಿತಿಗಳಿಗೆ ಅವಮಾನ ಮಾಡಿದೆ ಎಂದ ಅವರು ಇದೇ ಕಾರಣಕ್ಕಾಗಿ ಸಾಹಿತಿಗಳು ಇದೀಗ ತಮ್ಮ ಪಠ್ಯಗಳನ್ನು ಪಾಠ ಪುಸ್ತಕದಿಂದ ಹಿಂದಕ್ಕೆ ಪಡೆಯುವಂತೆ ಸರಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದರು.

ಸರಕಾರದ ಈ ನೀತಿಯನ್ನು ವಿರೋಧಿಸಿ ನಾಳೆ ಕಾಂಗ್ರೇಸ್ ಪಕ್ಷದ ವತಿಯಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೂ ನಡೆಯಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು