News Karnataka Kannada
Thursday, May 02 2024
ಮಂಗಳೂರು

ರುಡ್‍ಸೆಟ್ ಸಂಸ್ಥೆಗೆ ಭೇಟಿ ನೀಡಿದ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ

Rudset
Photo Credit :

ಬೆಳ್ತಂಗಡಿ : ರುಡ್‍ಸೆಟ್ ಸಂಸ್ಥೆಗಳ ಅಧ್ಯಕ್ಷ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂಸ್ಥೆಗೆ ಭೇಟಿ ನೀಡಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿದರು.

ಛಾಯಾಗ್ರಹಣದಲ್ಲಿ ತಾಳ್ಮೆ ಬಹಳ ಮುಖ್ಯ. ಛಾಯಾಗ್ರಾಹಕರಲ್ಲಿ ಭಾವನೆಯನ್ನು ಅರಿತು ಛಾಯಾಚಿತ್ರವನ್ನು ತೆಗೆಯುವುದು ಛಾಯಾಗ್ರಾಹಕನ ಕಲೆ ಎಂದು ಕಿವಿ ಮಾತು ನೀಡಿದರು. ನಿರ್ದೇಶಕ ಎಂ. ಸುರೇಶ್ ರವರು ತರಬೇತಿಯ ಹಿನ್ನೋಟ ನೀಡಿದರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕರಾದ ಸೂರ್ಯಪ್ರಕಾಶ್ ರವರು ಉಪಸ್ಥಿತರಿದ್ದರು. ರುಡ್‍ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಅನಸೂಯ ಧನ್ಯವಾದವಿತ್ತರು. ಈ ತರಬೇತಿ ಕಾರ್ಯಕ್ರಮದಲ್ಲಿ 23 ಶಿಭಿರಾರ್ಥಿಗಳು ಭಾಗವಹಿಸಿ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ತರಬೇತಿಯಲ್ಲಿ ತೆಗೆದ ಛಾಯಾಚಿತ್ರಗಳ ಪ್ರದರ್ಶನವನ್ನು ವೀಕ್ಷಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ಲಾಘಸಿದರು ಈ ಕಾರ್ಯಕ್ರಮದಲ್ಲಿ ಮೆನ್ಸ್ ಪಾರ್ಲರ್ ತರಬೇತಿಯ ಶಿಭಿರಾರ್ಥಿಗಳು ಕೂಡ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು