News Karnataka Kannada
Wednesday, May 08 2024
ಮಂಗಳೂರು

ಲವ್ ಜಿಹಾದಿಗೆ ಬಲಿ – ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

Untitled 11
Photo Credit :

ವಿಟ್ಲ : ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ಬುಧವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  14 ವರ್ಷದ ಅಪ್ರಾಪ್ತ ಬಾಲಕಿ ಆತ್ಮಿಕ ಸಾವನ್ನಪ್ಪಿದ್ದಾಳೆ. ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪ್ರೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ ಹುಡುಗಿ ಸಾವನ್ನಪ್ಪಿದ್ದಾಳೆ.

ಮೇಲ್ನೋಟಕ್ಕೆ ಆತ್ಮಹತ್ಯೆ ದಾಖಲಾಗಿದ್ದು ಇದು ಆತ್ಮಹತ್ಯೆಯಲ್ಲ ಕೊಲೆ, ಸಾಹುಲ್ ಹಮೀದ್ ವಾಮಾಚಾರವನ್ನು ಪ್ರಯೋಗಿಸಿ, ಬೆದರಿಸಿ, ಅವಳಿಗೆ ಬುರ್ಖಾ ಹಾಕಿಸಿ ಅವಳನ್ನು ಅವನ ಕುಟುಂಬದವರ ಸಹಕಾರದಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಎಂದು ಆ ಹುಡುಗಿಯ ಮನೆಯವರು ಆರೋಪಿಸಿದ್ದಾರೆ.

ಇದೊಂದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯವಾಗಿದೆ. ವಿಶ್ವ ಹಿಂದೂ ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಹುಡುಗಿಯ ಮನೆಗೆ ಹೋಗಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ ಅಲ್ಲದೆ ಈ ಸಾವಿಗೆ ಕಾರಣವಾದ ಸಾಹುಲ್ ಹಮೀದ್ ಮತ್ತು ಅವನ ಮನೆಯವರನ್ನು ಕೂಡಲೇ ಬಂಧಿಸಿ ಅವರಮೇಲೆ ಕೊಲೆ ಮೊಕ್ಕದ್ದಮೆ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು