ಮಂಗಳೂರು

ಲಾಯಿಲ, ಧರ್ಮಸ್ಥಳ, ಉಜಿರೆ, ಜಿಲ್ಲಾ ಪಂಚಾಯತ್ ಕ್ಷೇತ್ರವಾರು  ಸಂವಾದ ಸಭೆ

ಬೆಳ್ತಂಗಡಿ: ಗ್ರಾಮಾಂತರ ಬ್ಲಾಕ್‌ ವ್ಯಾಪ್ತಿಯ ಲಾಯಿಲ, ಧರ್ಮಸ್ಥಳ, ಉಜಿರೆ, ಜಿಲ್ಲಾ ಪಂಚಾಯತ್ ಕ್ಷೇತ್ರವಾರು  ಸಂವಾದ ಸಭೆ ಕಾರ್ಯಕ್ರಮವನ್ನು  ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು , ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕೋಲ್ನಾಡು ರವರು ಭಾಗವಹಿಸಿದರು.
ಸಂವಾದದಲ್ಲಿ ಪಂಚಾಯತ್ ಸದಸ್ಯರು, ಮಾಜಿ ಜಿಲ್ಲಾ, ತಾಲೂಕ್ , ಗ್ರಾಮ ಪಂಚಾಯತ್ ಹಾಗೂ ಪಂಚಾಯತ್ ನ ಸ್ಪರ್ಧಿಸಿದ್ದ ಅಭ್ಯರ್ಥಿಗಳು , ಪಂಚಾಯತ್ ಗಳಲ್ಲಿ, ಗ್ರಾಮ ಸಭೆಗಳಲ್ಲಿ ಆಯ್ಕೆಯಾಗಬೇಕಾದ ಫಲಾನುಭವಿಗಳ ಆಯ್ಕೆ ನಿಯಮಗಳನ್ನು ಪಾಲಿಸುತ್ತಿಲ್ಲ. ಅಧಿಕಾರ ವಿಕೇಂದ್ರಿಕರಣ ಕೇವಲ ಪುಸ್ತಕದಲ್ಲಿ ಮಾತ್ರ ಇದ್ದು ಅಧಿಕಾರಿಗಳು ಸುತ್ತೋಲೆಗಳ ಮೂಲಕ ಹಸ್ತಕ್ಷೇಪ ನಡೆಸುತ್ತಿದ್ದಾರೆ. ವಸತಿ ಯೋಜನೆಯಲ್ಲಿ ಸಾಮಾನ್ಯ ಆಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಅಲ್ಪ ಸಂಖ್ಯಾತ, ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳನ್ನು ಕೈ ಬಿಡಲಾಗುತ್ತಿದೆ ಎಂದರು
ಇದಕ್ಕೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರುವುದಾಗಿ ತಿಳಿಸಿದರು.
ಕಳೆದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಗ್ರಾಮ ಪಂಚಾಯತಿ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿಯಾಗಿ ಮಾತನಾಡಿ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತಿನ ಇಬ್ಬರೂ ಸದಸ್ಯರನ್ನು ಸಭೆಯು ಅಭಿನಂದಿಸಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಗ್ರಾಮಾಂತರ ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ರಂಜನ್ ಗೌಡ , ಬೆಳ್ತಂಗಡಿ ನಗರ ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ಶೈಲೇಶ್ ಕುರ್ತೋಡಿ  , ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ, ಬೆಳ್ತಂಗಡಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ , ಮಾಜಿ ಬ್ಲಾಕ್‌ ಅಧ್ಯಕ್ಷರಾದ ರಾಜಶೇಖರ್ ಅಜ್ರಿ, ರಾಜಶೇಖರ ಮಡಂತ್ಯಾರ್ ಉಪಸ್ಥಿತರಿದ್ದರು.
Sneha Gowda

Recent Posts

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

12 seconds ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

17 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

44 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

53 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago