ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ವಕೀಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ ಎಸ್ ಎನ್ ರಾಜೇಶ್ ಭಟ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನ್ ಶಿಪ್ ಮಾಡಲು ಬಂದಿದ್ದಳು ಕಛೇರಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದರೆನ್ನಲಾಗಿದೆ ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.
ಹನ್ನೆರಡಕ್ಕೂ ಹೆಚ್ಚು ಬ್ಯಾಂಕ್ ಗಳಲ್ಲಿ ರಾಜೇಶ್ ಭಟ್ ಕಾನೂನು ಸಲಹೆಗಾರರಾಗಿದ್ದಾರೆ ಘಟನೆಯ ಬಳಿಕ ಸಂತ್ರಸ್ತರಿಗೆ ಕರೆ ಮಾಡಿರೋ ರಾಜೇಶ್ ಕೆಲಸಕ್ಕೆ ಬರುವಂತೆ ಸಂತ್ರಸ್ತೆಯನ್ನು ಪರಿಪರಿಯಾಗಿ ಬೇಡಿಕೊಂಡಿದ್ದಾರೆ ಗೊತ್ತಿಲ್ಲದೆ ತಪ್ಪು ಮಾಡಿದೆ ಇನ್ನು ಮುಂದೆ ಆ ರೀತಿಯಾಗದಂತೆ ನೋಡಿಕೊಳ್ಳುತ್ತೇನೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ .
ನಿಮ್ಮ ಮನೆಯಲ್ಲಿ ನಿಮಗೆ ಪತ್ನಿ ಇಲ್ಲವೇ ನಿಮಗೆ ವಯಸ್ಸಾಗಿದೆ ನಿಮ್ಮ ಮಗಳನ್ನು ಇದೇ ರೀತಿ ನೋಡುತ್ತಿರಿ ಎಂದು ಸಂತ್ರಸ್ತೆ ರಾಜೇಶ್ ವಿರುದ್ಧ ಆಕ್ರೋಶ ಹೊರಹಾಕಿದರು .ನನಗೆ ಯಾರೂ ಇಲ್ಲ ಎಂದು ಅಂದುಕೊಂಡು ದುರ್ಬಳಕೆ ಮಾಡಿಕೊಳ್ಳುವ ಯತ್ನಿಸಿದ್ದೀರಿ ನೀವು ಶ್ರೀಮಂತರು ಏನು ಬೇಕಾದ್ರೂ ಮಾಡುತ್ತೀರಿ ಅದನ್ನೆಲ್ಲ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ.
ಇನ್ನು ಮುಂದೆ ನನ್ನ ನಂಬರಿಗೆ ಕರೆ ಮಾಡಬೇಡಿ ಎಂದು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಫೋನ್ ಸಂಪರ್ಕ ಕಡಿತಗೊಳಿಸಿದರೂ ಇದೀಗ ರಾಜೇಶ್ ಭಟ್ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಯು ನಿಯೋಗವೊಂದು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಲೈಂಗಿಕಿರುಕುಳ ನೀಡಿರುವ ಕೆಎಸ್ಆರ್ ರಾಜೇಶ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದಾರೆ. ಕೆ ಎನ್ ರಾಜೇಶ್ ಅನೇಕ ಯುವತಿಯರ ಜತೆ ಹೀಗೆ ನಡೆದುಕೊಂಡಿದ್ದಾರೆ ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ