ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ರೈತಮೋರ್ಚಾ ಬಂಟ್ವಾಳ ಮಂಡಲ ಮತ್ತು ವಿಟ್ಲ-ಪಡ್ನೂರು ಮಹಾಶಕ್ತಿಕೇಂದ್ರದ ವತಿಯಿಂದ, ದೇಶದ ಶ್ರೇಷ್ಠ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವಿಟ್ಲದ ಕೇಪು ಅಮೈನ ಮಹಾಲಿಂಗ ನಾಯ್ಕ ದಂಪತಿಗಳನ್ನು ವಿಟ್ಲ-ಪಡ್ನೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಮತ್ತು ರವೀಶ್ ಶೆಟ್ಟಿ ಕರ್ಕಳ, ವಿಟ್ಲ-ಪಡ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ಶಂಕರಿ ಬಳಿಪಗುಳಿ, ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿ ಕೊಡಂಗಾಯಿ, ಬಿಜೆಪಿ ನಾಯಕರಾದ ಮಾಧವ ಮಾವೆ, ಹಿಂದುಳಿದ ವರ್ಗದ ಜಿಲ್ಲಾ ಸದಸ್ಯರಾದ ಮೋನಪ್ಪ ದೇವಸ್ಯ ,ಬಂಟ್ವಾಳ ರೈತ ಮೋರ್ಚಾದ ಅಧ್ಯಕ್ಷರಾದ ವಿಶ್ವನಾಥ ಕಟ್ಟತ್ತಿಲ ಕೋಡಿ . ವಿಟ್ಲ-ಪಡ್ನೂರು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಸನತ್ ಕುಮಾರ್ ರೈ ಉಪಸ್ಥಿತರಿದ್ದರು.