News Karnataka Kannada
Saturday, May 04 2024
ಮಂಗಳೂರು

ವಿಟ್ಲ: ಮುಸ್ಲಿಮರ  ಮೇಲಿನ  ದೌರ್ಜನ್ಯ ಹಾಗೂ ಪ್ರವಾದಿ ನಿಂದನೆ ವಿರುದ್ಧ ಎಸ್‌ಕೆಎಸ್ಸೆಸ್ಸೆಫ್ ಪ್ರತಿಭಟನೆ 

Vittla
Photo Credit :
ಬಂಟ್ವಾಳ : ಎಸ್‌ಕೆಎಸ್ಸೆಸ್ಸೆಫ್ ವಿಟ್ಲ ವಲಯದ ವತಿಯಿಂದ ಮುಸ್ಲಿಮರ  ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಪ್ರವಾದಿ ಮಹಮ್ಮದ್ ರವರನ್ನು ಅವಹೇಳಿಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆಯು ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ನಡೆಯಿತು.
 ಪ್ರಚೋದನಕಾರಿ ಭಾಷಣ ಮಾಡಿ ಸಮಾಜದ ಸ್ವಸ್ಥ ಕೆಡಿಸುವವರ ವಿರುದ್ಧ ಹಾಗೂ ಪ್ರವಾದಿಯವರನ್ನು ನಿಂದಿಸಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವವರ ಮೇಲೆ ತಕ್ಷಣ ಕ್ರಮ ಜರಗಿಸುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.
ಯುವ ಚಿಂತಕ,ಬರಹಗಾರ ಉವೈಸ್ ತೋಕೆ ಮುಖ್ಯ ಪ್ರಭಾಷಣ ಮಾಡಿದರು.ಸಾಲೆತ್ರೂರು ರೇಂಜ್ ಪ್ರಧಾನ  ಕಾರ್ಯದರ್ಶಿ ಸಿ.ಎಚ್.ಇಬ್ರಾಹಿಂ ಮುಸ್ಲಿಯಾರ್ ಪ್ರಸ್ತಾವನೆ ಗೈದರು.ವಿಟ್ಲ ವಲಯದ ಪ್ರಧಾನ ಕಾರ್ಯದರ್ಶಿ ಕೆ.ಎ.ಎಂ.ಮಹಮ್ಮದ್ ರಫೀಕ್ ಮುಸ್ಲಿಯಾರ್ ಸ್ವಾಗತಿಸಿ ,ವಂದಿಸಿದರು.ವಿವಿಧ ವಲಯಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು