ಮಂಗಳೂರು: ನಗರದ ಬಲ್ಮಠದ ಖಾಸಗಿ ಪದವಿ ಕಾಲೇಜಿನ ಜೂನಿಯರ್ ಬ್ಯಾಚ್ನ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪೊಲೀಸರು ಸೀನಿಯರ್ ಬ್ಯಾಚ್ನ 8 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮೇ 28ರಂದು ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 28ರಂದು ಸಂಜೆ 4.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿತ್ತು. ಅನಂತರ ಸಭಾಂಗಣದ ಹೊರಗೆ ಗಲಾಟೆ ನಡೆದಿತ್ತು. ಆ ಬಳಿಕ ರಾತ್ರಿ 8.30ಕ್ಕೆ ಜೂನಿಯರ್ ಬ್ಯಾಚ್ನ ವಿದ್ಯಾರ್ಥಿಗಳು ಉಳಿದುಕೊಂಡಿದ್ದ ಚಿಲಿಂಬಿಯ ಅಪಾರ್ಟ್ಮೆಂಟ್ಗೆ ತೆರಳಿದ ಸೀನಿಯರ್ ಬ್ಯಾಚ್ನ 12 ಮಂದಿ ವಿದ್ಯಾರ್ಥಿಗಳು ಕೇರಳದ ಶಬಾಬ್ ಮತ್ತು ಇತರ ನಾಲ್ವರಿಗೆ ವಿಕೆಟ್ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳಾದ ಉಳ್ಳಾಲದ ಮೊಹಮ್ಮದ್ ಅಫ್ರೀಶ್ (21), ಪಾಂಡೇಶ್ವರದ ಸುನೈಫ್ (21), ಕಾಸರಗೋಡಿನ ಶೇಖ್ ಮೊಹಿದ್ದೀನ್ (20), ಕೋಟೆಕಾರ್ನ ಇಬ್ರಾಹಿಂ ರಾಜಿ (20), ಅಡ್ಕೂರಿನ ಮೊಹಮ್ಮದ್ ಸಿನಾನ್ ಅಬ್ದುಲ್ಲಾ (21), ಕೋಟೆಕಾರ್ನ ಮೊಹಮ್ಮದ್ ಅಶಾಮ್ (21), ಬಂದರಿನ ಮೊಹಮ್ಮದ್ ಅಫಾಮ್ ಅಸ್ಲಾಮ್ (20) ಮತ್ತು ಗುರುಪುರದ ಮೊಹಮ್ಮದ್ ಸೈಯದ್ ಅಫ್ರೀದ್ (21) ನನ್ನು ಬಂಧಿಸಲಾಗಿದೆ. ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…