ಮಂಗಳೂರು : ಶಂಕಿತ ರೇಬಿಸ್ ಗೆ ಪಿಯುಸಿ ವಿದ್ಯಾರ್ಥಿನಿ ಬಲಿಯಾದ ಘಟನೆ ದಕ್ಷಿಣ ಕನ್ನಡದ ಆಲಂಕಾರು ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಕಡಬದ ಸರಕಾರಿ ಪಿ ಯು ಕಾಲೇಜಿನ ವಿದ್ಯಾರ್ಥಿನಿಯಾದ ವಿನ್ಸಿ ಸಾರಮ್ಮ (17) ಮೃತ ಬಾಲಕಿ.
ವಿಪರೀತ ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದ ವಿನ್ಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
6 ತಿಂಗಳ ಹಿಂದೆ ರೇಬಿಸ್ ನಿಂದ ಮನೆಯ ನಾಯಿ ಮೃತಪಟ್ಟಿತ್ತು. ರೇಬಿಸ್ ವೈರಸ್ ಮೃತ ವಿನ್ಸಿಗೂ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.