ಮಂಗಳೂರು: ಕೆಲವು ತಿಂಗಳುಗಳಿಂದ ಕರಾವಳಿಯಲ್ಲಿ ತಣ್ಣಗಿದ್ದ ಹಿಜಬ್ ವಿವಾದ ಮತ್ತೆ ಮಂಗಳೂರಲ್ಲಿ ಕೇಳಿಬಂದಿದೆ. ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ತಲೆದೋರಿದ್ದು ತರಗತಿ ಬಹಿಷ್ಕರಿಸಿ ಕ್ಯಾಂಪಸ್ ಬಳಿ ಪ್ರತಿಭಟನೆ ನಡೆಯಿತು.
ಬಳಿಕ ಹಂಪನಕಟ್ಟೆಯಲ್ಲಿರುವ ಕಾಲೇಜಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪ್ರತಿಭಟನೆ ನಡೆದಿದೆ. ಹಿಜಾಬ್ ಧರಿಸಲು ಕೆಲವು ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿರುವ ಆರೋಪ ಮಾಡಿರುವ ಪ್ರತಿಭಟನಾನಿರತ ವಿದ್ಯಾರ್ಥಿಗಳು ನಮಗೂ ಕೇಸು ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಅಂತ ಪ್ರತಿಭಟನೆ ನಡೆಸಿದ್ದಾರೆ.
ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಸಭೆಯಲ್ಲಿ ಹಿಜಾಬ್ ಅವಕಾಶ ಇಲ್ಲ ಅಂತ ತೀರ್ಮಾನ ಮಾಡಿದರೂ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ ಎಂಬ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ.