Categories: ಮಂಗಳೂರು

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಮಾಧ್ಯಮ ಕಾರ್ಯಾಗಾರ

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ, ‘ಸಾಮಾಜಿಕ ಜಾಲ, ವೆಬ್‌ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ಇಲ್ಲಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯಿತು. ಈ ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

 

ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳಿಧರ ಕೆ. ಪ್ರಸ್ತಾವನೆಗೈದು ಸ್ವಾಗತಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಅಕ್ಷರೋಧ್ಯಮದ ಸುನಿಲ್ ಕುಲ್ಕರ್ಣಿ ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ, ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆರಂಭವಾಗಲಿರುವ ವೆಬ್ ಮೀಡಿಯಾ ‘ವಿಕಸನ ನ್ಯೂಸ್.ಇನ್’ ಗೆ ಚಾಲನೆ ನೀಡಿದರು. ಉಪ್ಪಿನಂಗಡಿಯ ಶ್ರೀರಾಮ ಪ್ರೌಡಶಾಲೆಯ ಮುಖ್ಯೋಪಾಧ್ಯಾಯ ರಘುರಾಮ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಉದ್ಘಾಟನಾ ಕಾರ್ಯಕ್ರಮದ ನಂತರದಲ್ಲಿ ವಿವಿಧ ಗೋಷ್ಠಿಗಳು ನಡೆದವು. ಮಂಗಳೂರಿನ ಅಕ್ಷರೋಧ್ಯಮದ ಸುನಿಲ್ ಕುಲ್ಕರ್ಣಿ ಶೈಕ್ಷಣಿಕವಾಗಿ ವೆಬ್‌ಸೈಟ್‌ಗಳ ಪರಿಣಾಮಕಾರಿಯಾಗಿ ಹೇಗೆ ಉಪಯೋಗಿಸಬಹುದು ಎನ್ನುವ ಕುರಿತಾಗಿ ಮಾಹಿತಿ ನೀಡಿದರು. ಪತ್ರಕರ್ತ ಬಿ.ಟಿ. ರಂಜನ್ ಮುದ್ರಣ ಮಾಧ್ಯಮದ ವರದಿಗಾರಿಕೆ ಕುರಿತಾಗಿ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕ ಅಜಯ್‌ಶಾಸ್ತ್ರೀ ಸಾಮಾಜಿಕ ಜಾಲಗಳ ಕುರಿತಾಗಿ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ವೆಬ್ ಮೀಡಿಯಾಗಳ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು.

 

ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಶಿವಪ್ರಸಾದ್ ವಹಿಸಿದ್ದರು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ್ ಉಪಸ್ಥಿತರಿದ್ದರು.

Sneha Gowda

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

3 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

3 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

4 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

4 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

4 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

5 hours ago