News Karnataka Kannada
Saturday, May 04 2024
ಮಂಗಳೂರು

ಶೂಟೌಟ್ ಪ್ರಕರಣದ ಸಮಗ್ರ ತನಿಖೆಗೆ ಡಿವೈಎಫ್ಐ ಆಗ್ರಹ

Shoot
Photo Credit :

ಮಂಗಳೂರು:  ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ ಗುಂಡು ಆತನ ಪುತ್ರನಿಗೆ ತಗುಲಿದ ಪ್ರಕರಣವನ್ನು ನಗರದ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಆಗ್ರಹಿಸಿದೆ.

ರಾಜೇಶ್ ಪ್ರಭು ಮಾಲಕತ್ವದ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯಲ್ಲಿ ವಾಹನ ಚಾಲಕರಾಗಿ ದುಡಿಯುತ್ತಿದ್ದ ಚಂದ್ರು ಮತ್ತು ಕ್ಲೀನರ್ ಅಶ್ರಫ್ ಎಂಬವರು ಸರಕು ಸಾಗಾಟ ಮಾಡಿದ ಕೂಲಿ ನೀಡುವಂತೆ ಕಳೆದೆರಡು ದಿನಗಳಿಂದ ಕೇಳಿಕೊಳ್ಳುತ್ತಿದ್ದರೂ ಸಂಬಳ ನೀಡಲು ನಿರಾಕರಿಸುತ್ತಿದ್ದ ವಿಚಾರಕ್ಕೆ ಸಂಬಂಧಿಸಿ ನಡೆದ ಮಾತಿನ ಚಕಮಕಿ ಮುಂದೆ ಹೊಯ್ ಕೈ ನಡೆಯುವವರೆಗೂ ಮುಂದುವರಿದಾಗ ತನ್ನ ಕೆಲಸದಾಳುವಿಗೆ ಹಾರಿಸಿದ ಗುಂಡು ತಪ್ಪಿ ಮಾಲಕನ ಪುತ್ರನಿಗೆ ತಗುಲಿದೆ. ಪುತ್ರ ಸುಧೀಂದ್ರನ ಪರಿಸ್ಥಿತಿ ಈಗ ಚಿಂತಾಜನಕವಾಗಿದ್ದು. ಈ ಮಧ್ಯೆ ಪ್ರಕರಣವನ್ನು ದಿಕ್ಕು ತಪ್ಪಿಸುವ ಮಾತುಗಳು ಕೇಳಿ ಬರುತ್ತಿದೆ. ಗುಂಡು ಹಾರಟ ನಡೆದ ಪ್ರಕರಣವನ್ನು ಕಾರ್ಮಿಕರ ತಲೆ ಮೇಲೆ ಹೊರಿಸಿ ಅವರನ್ನು ತಪ್ಪಿತಸ್ಥರನ್ನಾಗಿಸುವ ತಯಾರಿಗಳು ನಡೆಯುತ್ತಿವೆ ಎಂಬ ವಿಚಾರಗಳು ಕೇಳಿ ಬರುತ್ತಿದ್ದು ಮಾಲಕ ರಾಜೇಶ್ ಪ್ರಭು ಪ್ರಕರಣದಿಂದ ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ವಿಚಾರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ  ಮಂಗಳೂರು ನಗರ ಪೊಲೀಸ್ ಆಯುಕ್ತರು ಶೂಟೌಟ್  ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಕಳೆದ ಹಲವಾರು ವರುಷಗಳಿಂದ ಕಾರ್ಮಿಕರನ್ನು ದುಡಿಸಿ ಸಂಬಳ ನೀಡದೆ ಸತಾಯಿಸುವಂತಹ ಕೆಲಸಗಳನ್ನು ಸಂಸ್ಥೆಯ ಮಾಲಕ ಮಾಡುತ್ತಾ ಬಂದಿದ್ದು, ಕಾರ್ಮಿಕರು ದುಡಿದ ಸಂಬಳವನ್ನು ಕೇಳಿದರೆ ಪಿಸ್ತೂಲು ತೋರಿಸಿ ಬೆದರಿಸುವಂತಹ ಘಟನೆಗಳು ಈ ಹಿಂದೆಯೂ ನಡೆದಿದೆ.

ಆದ್ದರಿಂದ ಈ ಗುಂಡು ಹಾರಟ ನಡೆಸಿದ ಪ್ರಕರಣವು ಯಾವುದೇ ಕಾರಣಕ್ಕೂ ದಿಕ್ಕು ತಪ್ಪದ ರೀತಿಯಲ್ಲಿ ನೋಡಿಕೊಳ್ಳಲು, ಪ್ರಕರಣವನ್ನು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು