ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ನಡೆಯುವ ಸಾಮೂಹಿಕ ಉಚಿತ ವಿವಾಹ ಸಮಾರಂಭ ಇಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.
1972 ರಲ್ಲಿ ಆರಂಭವಾದ ಸಾಮೂಹಿಕ ವಿವಾಹ ಸಮಾರಂಭಕ್ಕೆ ಇದೀಗ 50 ನೇ ವರ್ಷದ ಸಂಭ್ರಮ. 2021 ರವರೆಗೆ 12,392 ಜೋಡಿಗಳು ಹಸೆಮಣೆಗೇರಿದ್ದಾರೆ. ಇಂದು ಗೋಧೂಳಿ ಲಗ್ನದಲ್ಲಿ 200 ಕ್ಕೂ ಹೆಚ್ಚು ಮಂದಿ ದಾಂಪತ್ಯ ಜೀವನ ಸ್ವೀಕರಿಸಲಿದ್ದಾರೆ. ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆಯವರು ನೂತನ ದಂಪತಿಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.