News Karnataka Kannada
Tuesday, April 30 2024
ಮಂಗಳೂರು

 ಶ್ರೀ ಕ್ಷೇತ್ರ ಅಭಿವೃದ್ಧಿಗೆ 300 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್: ಸಚಿವ ಅಂಗಾರ

Subrahmanya
Photo Credit :

ಸುಬ್ರಹ್ಮಣ್ಯ: ಸುಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯವನ್ನು ಜಗತ್ಪ್ರಸಿದ್ಧಗೊಳಿಸುವ ನಿಟ್ಟಿನಲ್ಲಿ ಬೃಹತ್ ಮೊತ್ತದ ಮಾಸ್ಟರ್ ಪ್ಲಾನ್ ಗೆ ಸಿದ್ಧತೆ ನಡೆದಿದ್ದು, 300 ಕೋಟಿ ರೂ. ವೆಚ್ಚದ ಈ ಮಾಸ್ಟರ್ ಪ್ಲಾನ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ. ಯೋಜನೆ ಡಿಪಿಆರ್ ಸಹಿತ ಎಲ್ಲವೂ ಸಿದ್ಧವಾಗಿದ್ದು, 2 ವರ್ಷದೊಳಗೆ ಪೂರ್ಣಗೊಳಿಸಲು ಗಡುವನ್ನೂ ಹಾಕಿಕೊಳ್ಳಲಾಗಿದೆ.

ಈಗಾಗಲೇ ಕ್ಷೇತ್ರದಲ್ಲಿ 180 ಕೋಟಿ ರೂ. ವೆಚ್ಚದ 1ನೇ, 2ನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿ ಮುಕ್ತಾಯಗೊಂಡಿದ್ದು, ಇದೀಗ ಮತ್ತೆ 300 ಕೋಟಿ ವೆಚ್ಚದ ಕಾಮಗಾರಿಗೆ ಸಿದ್ಧತೆ ನಡೆದಿದೆ. ಮುಖ್ಯವಾಗಿ ದೇವಸ್ಥಾನದ ರಥಬೀದಿ ಇಕ್ಕೆಲದಲ್ಲೂ ಶಿಲಾಮಯ ಪಾರಂಪರಿಕೆ ಶೈಲಿ ಕಟ್ಟಡ ತಲೆ ಎತ್ತಲಿದೆ. ಈ ಕಟ್ಟಡಗಳನ್ನು 3 ಪಾರಂಪರಿಕ ವಿನ್ಯಾಸದಲ್ಲಿ ಕಟ್ಟಲಾಗುತ್ತಿದ್ದು, ಮುಂಭಾಗ ವಿಜಯನಗರ ಶೈಲಿ, ಒಳಭಾಗ ಮೈಸೂರು ಶೈಲಿ, ಛಾವಣಿ ದ.ಕ. ಶೈಲಿಯಲ್ಲಿ ನಿರ್ಮಾಣವಾಗಲಿದೆ. ಮುಂದಿನ 2000 ವರ್ಷಗಳವರೆಗೂ ಕಟ್ಟಡ ವಿನ್ಯಾಸ ಬದಲಿಸದಂತಹ ರೀತಿ ನಿರ್ಮಾಣವಾಗಲಿದೆ ಎಂದು ಸಚಿವ ಎಸ್. ಅಂಗಾರ ಮಾಹಿತಿ ನೀಡಿದ್ದಾರೆ.

ಆಶ್ಲೇಷ ಬಲಿ ಪೂಜೆಗೆ ಹೊಸ ಮಂಟಪ ಸಿದ್ಧಗೊಳ್ಳಲಿದ್ದು, ಒಂದೇ ಬಾರಿಗೆ 250 ಪೂಜೆಗಳನ್ನು ಕುಟುಂಬ ಸಮೇತ ನಡೆಸಲು 4 ಮಂಟಪ ನಿರ್ಮಾಣವಾಗಲಿದೆ. ಈ ಮೂಲಕ ದಿನಕ್ಕೆ 1000 ಪೂಜೆ ನಡೆಸಲು ವ್ಯವಸ್ಥೆ ಮಾಡಲಾಗುತ್ತದೆ. ಒಂದೇ ಬಾರಿಗೆ 3500 ಭಕ್ತರಿಗೆ ಅನ್ನ ಸಂತರ್ಪಣೆ ಛತ್ರ ನಿರ್ಮಾಣಗೊಳ್ಳಲಿದೆ. ಪ್ರಕೃತಿ- ಯೋಗ ಚಿಕಿತ್ಸಾಲಯ ಜತೆಗೆ ವಿಷ ಜಂತು ಕಡಿತಕ್ಕೊಳಗಾದವರ ಚಿಕಿತ್ಸೆಗೆ ವಿಶೇಷ ಚಿಕಿತ್ಸಾಲಯವೂ ಈ ಮಾಸ್ಟರ್ ಪ್ಲಾನ್ ಒಳಗೊಂಡಿದೆ.‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು