News Karnataka Kannada
Saturday, May 04 2024
ಮಂಗಳೂರು

ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಭಾನುವಾರ 75 ನೇ ವರ್ಷದ ವರ್ಷಾವಧಿ ನೇಮೋತ್ಸವ

Bltngdy
Photo Credit :

ಬೆಳ್ತಂಗಡಿ: ಗ್ರಾಮ ಮಟ್ಟದಲ್ಲಿ ದೈವ ದೇವರ ಆರಾಧನೆ, ಆಚರಣೆಗಳಿಂದ ಹಿಂದೂ ಸಮಾಜ ಇನ್ನಷ್ಟು ಶಕ್ತಿಶಾಲಿಯಾಗುತ್ತದೆ ಎಂದು ಶಾಸಕ ಹರೀಶ ಪೂಂಜ ಅಭಿಪ್ರಾಯಪಟ್ಟರು.

ಅವರು, ಅಳದಂಗಡಿ ಸನಿಹದ ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಭಾನುವಾರ 75 ನೇ ವರ್ಷದ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಪರಶುರಾಮ ಸೃಷ್ಟಿಯಲ್ಲಿರುವ ಬೆಳ್ತಂಗಡಿಯಲ್ಲಿ ಧಾರ್ಮಿಕ ಆರಾಧನೆಗಳು ನಮ್ಮನ್ನು ಕಾಪಾಡಿಕೊಂಡು ಬಂದಿವೆ. ಆರ್ಥಿಕವಾಗಿ, ಸಾಮಾಜಿಕವಾಗಿ ತಾಲೂಕು ಸದೃಢವಾಗಿದೆ ಎಂದರು.

ಅಧ್ಯಕ್ಷತೆಯನ್ನು ಗರಡಿ ಸಮಿತಿಯ ಗೌರವಾಧ್ಯಕ್ಷ ಶಿವಪ್ರಸಾದ ಅಜಿಲ‌ ವಹಿಸಿದ್ದರು. ವೇದಿಕೆಯಲ್ಲಿ ಉದ್ಯಮಿಗಳಾದ ಸುರೇಶ್ ಪೂಜಾರಿ, ಪ್ರವೀಣ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪಿ.ಎಚ್.ನಿತ್ಯಾನಂದ ಶೆಟ್ಟಿ, ಅಳದಂಗಡಿ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ, ತಾ.ಪಂ. ಮಾಜಿ ಸದಸ್ಯ ಸುಧೀರ ಸುವರ್ಣ, ಗ್ರಾ.ಪಂ.ಸದಸ್ಯರಾದ ಪ್ರವೀಣ ಬರಯ, ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಕಂಬಳ ಓಟಗಾರ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಗರಡಿಯ ಹಿರಿಯ ಸೇವಾಕರ್ತೃಗಳನ್ನು, ವಿವಿಧ ಕ್ಷೇತ್ರದ ಸಾಧಕರುಗಳನ್ನು ಸಮ್ಮಾನಿಸಲಾಯಿತು. ನುಡಿಕಟ್ಟು ಎಂಬ ಸ್ಮರಣ ಸಂಚಿಕೆಯನ್ನು‌ ಬಿಡುಗಡೆಗೊಳಿಸಲಾಯಿತು. ಶಾಸಕರ ಅನುದಾನದಿಂದ ಗರಡಿ ಎದುರು ಇಂಟರ್ಲಾಕ್ ಹಾಕಿರುವುದನ್ನು ಸ್ಮರಿಸಲಾಯಿತು. ವಿಜಯಕುಮಾರ್ ಜೈನ್ ಸ್ವಾಗತಿಸಿದರು. ಕೃಷ್ಣಪ್ಪ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು