ಸಂದೇಶ ಪ್ರತಿಷ್ಠಾನ ನಿರ್ದೇಶಕರಿಗೆ ಬೀಳ್ಕೊಡುಗೆ, ಸನ್ಮಾನ ಕಾರ್ಯಕ್ರಮ

ಮಂಗಳೂರು: ನಗರದ ಸಂದೇಶ ಪ್ರತಿಷ್ಠಾನದ ನಿರ್ದೇಶಕರಾಗಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ರೆ.ಫಾ. ಫ್ರಾನ್ಸಿಸ್ ಅಸ್ಸಿಸಿ ಡಿ’ಅಲ್ಮೇಡಾ ಇವರ ಬೀಳ್ಕೊಡುಗೆ ಕಾರ್ಯಕ್ರಮವು ನಗರದ ನಂತೂರಿನ ಸಂದೇಶ ಪ್ರತಿಷ್ಠಾನದ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ಧರ್ಮಪ್ರಾಂತ ಸಾರ್ವಜನಿಕ ಸಂಪರ್ಕ ಅಧಿಕಾರಿ ರೆ.ಫಾ. ಜೆ.ಬಿ. ಸಲ್ದಾನ ಸನ್ಮಾನ ನೆರವೇರಿಸಿದರು. ಬಳಿಕ ಅಸ್ಸಿಸ್ಸಿ ಡಿ’ಅಲ್ಮೇಡಾ ಅವರ ಹಿತೈಷಿ, ಅಭಿಮಾನಿಗಳು ಗೌರವಿಸಿ ಶುಭ ಹಾರೈಸಿದರು.

ಈ ಸಂದರ್ಭ ಮಾತನಾಡಿದ ರೆ.ಫಾ. ಜೆ.ಬಿ. ಸಲ್ದಾನ, ಫ್ರಾನ್ಸಿಸ್ ಅಸ್ಸಿಸ್ಸಿ ತಾನು ನಿರ್ದೇಶಕನಾಗಿ ನಿರ್ವಹಿಸಿದ್ದ ಮೂರು ವರುಷಗಳಲ್ಲಿ ಸಮಾಜಕ್ಕೆ ಉತ್ತಮವಾದ ಸೇವೆ ಒದಗಿಸಿದ್ದಾರೆ.‌ ಶೈಕ್ಷಣಿಕ ಅವಧಿಯಲ್ಲೇ ಚುರುಕಿನ ಮತ್ತು ಉತ್ತಮ ನಾಯಕತ್ವ ಹೊಂದಿರುವ ವ್ಯಕ್ತಿತ್ವವುಳ್ಳರಾಗಿದ್ದರು. ಕೇವಲ ಕ್ರೈಸ್ತ ಸಮುದಾಯದ ಏಳಿಗೆಗಾಗಿ ಮಾತ್ರವಲ್ಲ ಎಲ್ಲ ಸಮುದಾಯವನ್ನು ಜೊತೆಗೂಡಿಸಿ ಕರೆದೊಯ್ಯುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಸರ್ವರಿಗೆ ಸ್ಪಂದಿಸುವ ಮೂಲಕ ದೇವ ಭಕ್ತಿಯನ್ನು ಕಾಣಲು ಅವರಲ್ಲಿ ಸಾಧ್ಯವಾಗಿತ್ತು. ಹೀಗಾಗಿಯೇ ಅವರನ್ನು ಸಂದೇಶ ಪ್ರತಿಷ್ಠಾನಕ್ಕೆ ಆಯ್ಕೆ ಮಾಡಲಾಗಿತ್ತು ಎಂದರು.

ಇನ್ನು ಕೋವಿಡ್ ಸಮಯದಲ್ಲಿ ಆನ್ ಲೈನ್ ಮೂಲಕ ಸಂಗೀತ ವಿದ್ಯೆಯನ್ನು‌ ಕಲಿಸುವ ಮೂಲಕ ಸಂದೇಶ ಪ್ರತಿಷ್ಠಾನದ ಹಿರಿಮೆ ಹೆಚ್ಚಿಸಿದ ಕೀರ್ತಿ ಅಸ್ಸಿಸಿ ಡಿ’ಅಲ್ಮೇಡಾ ಅವರಿಗೆ ಸಲ್ಲುತ್ತದೆ. ಅವರ ಮುಂದಿನ ಭವಿಷ್ಯವು ಉಜ್ವಲವಾಗಲಿ ಎಂದು ಜೆ.ಬಿ. ಸಲ್ದಾನ ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರೆ.ಫಾ. ಫ್ರಾನ್ಸಿಸ್ ಅಸ್ಸಿಸಿ ಡಿ’ಅಲ್ಮೇಡಾ, ಮೂರು ವರ್ಷಗಳ ಕಾಲ ನಿರ್ದೇಶಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಪ್ರತಿಷ್ಠಾನಕ್ಕೆ ಹಾಗೂ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದರು.‌

ಇದೇ ಸಂದರ್ಭ ನೂತನ ನಿರ್ದೇಶಕರಾಗಿ ಆಗಮಿಸಿದ ಪ್ರೊ. ಜಾನ್ ಡಿಸಿಲ್ವ ಇವರನ್ನು ಆತ್ಮೀಯವಾಗಿ ಪ್ರತಿಷ್ಠಾನವು ಬರಮಾಡಿಕೊಂಡಿತು.

ವೇದಿಕೆಯಲ್ಲಿ ರೋಯ್ ಕ್ಯಾಸ್ಟಲಿನೋ, ನೂತನ ನಿರ್ದೇಶಕ ಪ್ರೊ. ಜಾನ್ ಡಿಸಿಲ್ವ ಉಪಸ್ಥಿತರಿದ್ದರು.

Swathi MG

Recent Posts

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

7 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

9 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

35 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

44 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

47 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

59 mins ago