Categories: ಮಂಗಳೂರು

ಸಮಯಪಾಲನೆಗೆ ಹೆಚ್ಚಿನ ಒತ್ತು ನೀಡಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಪಶ್ಚಿಮ ಘಟ್ಟ ಹಾದೂಹೋಗಿರುವ ಜಿಲ್ಲೆಯ ರಸ್ತೆಗಳು ಕೆಲವೆಡೆ ಕಿರಿದಾಗಿದ್ದು, ಸಂಚರಿಸುವ ಬಸ್ಸುಗಳು ಸಮಯಪಾಲನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.

ಅವರು ಜ.13ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಿರಿದಾದ ರಸ್ತೆಯಲ್ಲಿ ಸಂಚರಿಸುವಾಗ ಜಾಗೃತೆಯಿಂದ ಚಲಿಸಬೇಕು, ಸಮಯಪಾಲನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದ ಅವರು, ಸಂಚಾರ ದಟ್ಟಣೆ ಅವಧಿ ಹಾಗೂ ಇತರೆ ಸಮಯದಲ್ಲೂ ಕೂಡ ಸಾರ್ವಜನಿಕರು ಹಾಗೂ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಖಾಸಗಿ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಸಂಚರಿಸಬೇಕು ಎಂದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಸಮಯಪಾಲನೆಗೆ ಒತ್ತು ನೀಡಬೇಕು, ಅವುಗಳಿಗೆ ನೀಡಲಾದ ನಿಗದಿತ ಸಮಯವನ್ನು ಬಿಟ್ಟು ಇತರೆ ಸಮಯದಲ್ಲಿ ರೂಟ್‍ಗಳಿಗೆ ತೆರಳಿ, ಸಮಯ ಪಾಲನೆಯ್ನನು ಉಲ್ಲಂಘಿಸಿದರೆ ಆ ಬಸ್ಸುಗಳಿಗೆ ನೀಡಲಾದ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ಖಾರವಾಗಿ ತಿಳಿಸಿದರು.

ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಪ್ರಯಾಣಿಕರಿದ್ದು, ಆ ಸ್ಥಳಗಳಿಂದ ಬಸ್‍ಗಳ ಸಂಚಾರಕ್ಕೆ ಖಾಸಗಿ ಬಸ್ ಮಾಲೀಕರು ಪರ್ಮಿಟ್ ಪಡೆದು ಕೂಡ ಸಂಚರಿಸುವುದು ಕಂಡುಬರದಿದ್ದರೆ, ಅವುಗಳಿಗೆ ಅವುಗಳಿಗೆ ನೀಡಲಾದ ಪರ್ಮಿಟ್‍ಅನ್ನು ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವರದಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಯವರು, ಕೆಲವು ಪ್ರದೇಶಗಳಲ್ಲಿ ಪ್ರಯಾಣಿಕರಿದ್ದೂ, ಖಾಸಗಿ ಬಸ್‍ಗಳೂ ಅಲ್ಲಿಂದ ಆಪರೇಟ್ ಮಾಡದೇ ಇದ್ದಲ್ಲೀ, ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ಓಡಿಸಲು ಪರಿಶೀಲನೆ ನಡೆಸುವಂತೆ ಕೆಎಸ್‍ಆರ್‍ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣಾ ಎಸ್.ಎನ್. ಅವರಿಗೆ ತಿಳಿಸಿದರು.

ಕೆಲವೊಂದು ರೂಟ್‍ಗಳಲ್ಲಿ ಕಡಿಮೆ ಬಸ್‍ಗಳಿದ್ದು ಹೆಚ್ಚಿನ ಪ್ರಯಾಣಿಕರಿದ್ದರೆ, ಅಲ್ಲಿ ಹೆಚ್ಚಿನ ಟ್ರಿಪ್ ಮಾಡಲು ಇರುವ ಅನುಕೂಲತೆಗಳ ಬಗ್ಗೆ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರು ಪರಿಶೀಲಿಸುವಂತೆ ಸೂಚಿಸಿದರು.

ಎಬಿಶೆಟ್ಟಿ ಸರ್ಕಲ್‍ನಿಂದ ಕ್ಲಾಕ್‍ಟವರ್ ವರೆಗೆ ರಸ್ತೆ ವಿಶಾಲವಾಗಿದೆಯೆಂದು ಕಾಂಟ್ರಾಕ್ಟ್ ಕ್ಯಾರೇಜ್ ಬಸ್‍ಗಳಾಗಲಿ, ಇತರೆ ಬಸ್‍ಗಳಾಗಲೀ ಅಲ್ಲಿ ತಮ್ಮ ಬಸ್‍ಗಳನ್ನು ನಿಲ್ಲಿಸಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯುಂಟು ಮಾಡಿದ್ದಲ್ಲೀ, ಶಾಶ್ವತವಾಗಿ ಅವುಗಳ ಪರ್ಮಿಟ್ ರದ್ದು ಪಡಿಸಲಾಗುವುದು ಎಂದರು.

ಎನ್.ಎಂ.ಪಿ.ಟಿಯಿಂದ ವಿವಿಧ ಕಚ್ಛಾ ಸಾಮಗ್ರಿಗಳು ಹಾಗೂ ಇತರೆ ವಸ್ತುಗಳನ್ನು ಸಾಗಿಸುವ ಲಾರಿಗಳು ನಿಗಧಿ ಪಡಿಸಲಾದ ಟನ್‍ಗಳನ್ನಷ್ಟೇ ಸಾಗಿಸಬೇಕು, 30 ಟನ್ ಬದಲು 40 ಟನ್‍ಗಳನ್ನು ಟ್ರಕ್‍ಗಳು ಸಾಗಾಟ ಮಾಡಿದರೆ ರಸ್ತೆ ಹಾನಿಗೀಡಾಗುತ್ತದೆ, ಇದನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪೆÇಲೀಸರ ನೆರವಿನಿಂದ ಪತ್ತೆಹಚ್ಚಬೇಕು, ಓವರ್ಲೋಡ್ ಆಗ ಲಾರಿಗಳನ್ನು ಯಾರ್ಂಡಮ್ ತಪಾಸಣೆ ನಡೆಸಿ ವೇಬ್ರಿಜ್ಡ್‍ನಲ್ಲಿ ತಪಾಸಣೆ ನಡೆಸಬೇಕು, ಎನ್‍ಎಂಪಿಟಿಯಿಂದ ಲೋಡ್ ಆಗುವ ಟ್ರಕ್‍ಗಳು ಪ್ರತಿದಿನ ಹೊತ್ತುಕೊಂಡು ಹೋಗುವ ತೂಕದ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಎನ್‍ಎಂಪಿಟಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರಾಧ ಮತ್ತು ಸಂಚಾರದ ಡಿಸಿಪಿ ದಿನೇಶ್ ಕುಮಾರ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಎಂ. ವರ್ಣೇಕರ್ ವೇದಿಕೆಯಲ್ಲಿದ್ದರು.

ಖಾಸಗಿ ಬಸ್‍ಗಳ ಮಾಲೀಕರ ಸಂಘದ ಪದಾಧಿಕಾರಿಗಳು, ವಕೀಲರು, ದಕ್ಷಿಣ ಕನ್ನಡ ಟ್ರಕ್ ಮಾಲೀಕರ ಸಂಘದ ಅಧ್ಯಕ್ಷ ಸುನೀಲ್ ಡಿಸೋಜಾ, ಕಾರ್ಯದರ್ಶಿ ಸುಶಾಂತ್ ಶೆಟ್ಟಿ, ರಿಕ್ಷಾ ಮಾಲೀಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಮಂಗಳೂರು ಕೆನರಾ ಬಸ್ ಮಾಲೀಕರ ಸಂಘ, ಮಂಗಳೂರು-ಉಡುಪಿ ಕರಾವಳಿ ಬಸ್ ಮಾಲೀಕರ ಸಂಘದ ರಾಜ್ಯಾಧ್ಯಕ್ಷರು, ಜಿಲ್ಲಾ ಅಧ್ಯಕ್ಷರು, ಇತರೆ ಬಸ್ ಪರವಾನಿಗೆದಾರರು ಹಾಗೂ ಸಾರ್ವಜನಿಕರು ಸಭೆಯಲ್ಲಿದ್ದರು.

Sneha Gowda

Recent Posts

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

9 mins ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

37 mins ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

1 hour ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

2 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

3 hours ago