ಬೆಳ್ತಂಗಡಿ: ಟೀಚ್ ಟು ರೀಚ್ ಎಂಬ ಕಾರ್ಯಕ್ರಮದಡಿಯಲ್ಲಿ ಸಮಯ ನಿರ್ವಹಣೆ ಹಾಗೂ ಪರೀಕ್ಷಾ ಪೂರ್ವ ತಯಾರಿ ಕುರಿತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಶ್ರೀ.ಧರ್ಮಸ್ಥಳ ಮಂಜುನಾಧೇಶ್ವರ ಪಿ.ಜಿ.ಕಾಲೇಜ್ ಉಪನ್ಯಾಸಕಿ ಅಶ್ವಿನಿ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯರನ್ನೊಳಗೊಂಡ ತಂಡವು ಶಾಲೆಯ ಏಳು ಹಾಗೂ ಎಂಟನೆಯ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಸಮಯದ ಸದುಪಯೋಗ,ಪರೀಕ್ಷಾ ಪೂರ್ವ ತಯಾರಿ ಹೇಗಿರಬೇಕು,ಯಾವ ರೀತಿಯಲ್ಲಿ ನಡೆಸಬೇಕು ಎಂಬಿತ್ಯಾದಿ ವಿಚಾರಗಳನ್ನು ಮನವರಿಕೆ ಮಾಡಿಕೊಡಲಾಯಿತು.ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ.ಹಾಗೂ ಶಾಲಾ ಅಧ್ಯಾಪಕ ವೃಂದ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಸಮಯ ನಿರ್ವಹಣೆ ಕುರಿತು ಧರ್ಮಸ್ಥಳ ಕಾಲೇಜಿನ ಮನಶ್ಯಾಸ್ತ್ರ ವಿಭಾಗದಿಂದ ಕಾರ್ಯಾಗಾರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.