ಬೆಳ್ತಂಗಡಿ: ಹಕ್ಕುಪತ್ರದಲ್ಲಿ ಊರ್ಜಿತವಿರುವ ರಸ್ತೆಯನ್ನು ಮುಚ್ಚಿ ಪಕ್ಕದ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ಹಾಗೂ ರಸ್ತೆ ನಿರ್ಮಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯಿತಿಯ ಎರ್ಮಾಳಪಲ್ಕೆ ಎಂಬಲ್ಲಿ ನಡೆದಿದೆ.
ಇಲ್ಲಿನ ಮಹಿಳೆಯೊಬ್ಬರಿಗೆ ಗ್ರಾಮದ 70ನೇ ಸರ್ವೆ ನಂಬರ್ ನಲ್ಲಿ ಹಕ್ಕುಪತ್ರ ವಿದೆ. ಈ ಹಿಂದೆ ಅವರು ಇದೇ ಜಾಗದ ರಸ್ತೆಯನ್ನು ಬಳಸುತ್ತಿದ್ದರು. ಆದರೆ ಇತ್ತೀಚೆಗೆ ಈ ಜಾಗದ ಸಮೀಪ ಇರುವ ಸರಕಾರಿ ಸ್ಥಳದಲ್ಲಿ ರಸ್ತೆ ನಿರ್ಮಿಸಿದ್ದು ಕಟ್ಟಡವನ್ನು ಕಟ್ಟಲಾಗಿತ್ತು.
ಈ ವಿಚಾರ ಪಂಚಾಯಿತಿಯ ಗಮನಕ್ಕೆ ಬರುತ್ತಿದ್ದಂತೆ ಪಂಚಾಯಿತಿ ವತಿಯಿಂದ ಕಟ್ಟಡ ಹಾಗೂ ರಸ್ತೆ ತೆರವುಗೊಳಿಸುವ ಕುರಿತು ಮಹಿಳೆಗೆ ನೋಟೀಸು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಅಕ್ರಮ ರಸ್ತೆ ನಿರ್ಮಾಣ ಮತ್ತು ಕಟ್ಟಡ ಕಟ್ಟಿರುವ ಕುರಿತು ಸ್ಥಳ ಪರಿಶೀಲನೆ ನಡೆಸಿದ್ದು, ಇದನ್ನು ತೆರವುಗೊಳಿಸುವಂತೆ ತಹಸೀಲ್ದಾರರಿಗೆ ಮನವಿ ನೀಡಲಾಗಿದೆ ಎಂದು ಗ್ರಾಪಂ ಅಧ್ಯಕ್ಷ ಅಶೋಕ್ ಕುಮಾರ್ ತಿಳಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…