News Karnataka Kannada
Sunday, May 12 2024
ಮಂಗಳೂರು

ಸರಳವಾಗಿ ಕೃಷ್ಣ ಜಯಂತಿ ಆಚರಣೆ

Krishna 30082021
Photo Credit :

ಮಂಗಳೂರು : ಶ್ರೀ ಕೃಷ್ಣ ಪರಮಾತ್ಮ ಅತ್ಯುತ್ತಮ ಮಾರ್ಗದರ್ಶಕ ಎಂದು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಅಭಿಪ್ರಾಯಪಟ್ಟರು.

ಅವರು ಆಗಸ್ಟ್ 30ರ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃಷ್ಣ ಜಯಂತಿಯಲ್ಲಿ ಮಾತನಾಡಿದರು.

ಕೃಷ್ಣ, ಕಂಸ ಸೇರಿದಂತೆ ದುಷ್ಟರನ್ನು ಸಂಹರಿಸಿದ ರೀತಿ, ಮಹಾಭಾರತದಲ್ಲಿ ಪಾಂಡವರೊಂದಿಗೆ ನಿಂತು ಧರ್ಮವನ್ನು ಕಾಪಾಡಿದ ರೀತಿಯನ್ನು ನೋಡುವಾಗ ಇಡೀ ಪ್ರಪಂಚಕ್ಕೆ ಹೇಗೆ ಮಾರ್ಗದರ್ಶಕರಾಗಿದ್ದರು ಎಂಬುದು ತಿಳಿಯುತ್ತದೆ ಎಂದರು.

ಇಂದು ಪ್ರತಿ ಮನೆಯಲ್ಲೂ ಮಕ್ಕಳಿಗೆ ಕೃಷ್ಣ ಪರಮಾತ್ಮನ ವೇಷ ತೊಡಿಸುವ, ಮಕ್ಕಳಲ್ಲಿ ಕೃಷ್ಣನನ್ನು ಕಾಣುತ್ತಾರೆ, ಆ ಮೂಲಕ ಮಕ್ಕಳು ಕೂಡಾ ಕೃಷ್ಣನಂತೆ ಆಗಲಿ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಅಧ್ಯಕ್ಷ ಮಧುಸೂದನ್, ದ.ಕ. ಗೊಲ್ಲ(ಯಾದವ) ಸಂಘದ ಅಧ್ಯಕ್ಷ ಪಿ.ಆರ್. ಕುಮಾರಸ್ವಾಮಿ, ಮಾಜಿ ಶಾಸಕ ಪದ್ಮನಾಭ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕೋವಿಡ್ – 19 ಸೋಂಕು ಹಿನ್ನಲೆಯಲ್ಲಿ ಈ ಬಾರಿ ಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಶಾಸಕರಾದ ವೇದವ್ಯಾಸ್ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಇತರೆ ಗಣ್ಯರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು