News Karnataka Kannada
Tuesday, May 07 2024
ಮಂಗಳೂರು

ಸರ್ಕಾರದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ತಾಲೂಕಿನಲ್ಲಿ‌ ಉತ್ತಮ‌ಪ್ರತಿಕ್ರಿಯೆ

Mangaluru: Derebail Sankesh area CITU welcome committee formed
Photo Credit :

ಬಂಟ್ವಾಳ: ಗ್ರಾಮಸ್ಥರ ಸಮಸ್ಯೆಗಳಿಗೆ ಗ್ರಾಮಮಟ್ಟದಲ್ಲೇ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸರ್ಕಾರ ಗ್ರಾಮ ವಾಸ್ತವ್ಯವನ್ನು ಆಯೋಜಿಸಿದ್ದು, ಪ್ರತೀ ತಾಲೂಕಿನಲ್ಲೂ ಉತ್ತಮ‌ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಬಂಟ್ವಾಳ ತಹಶೀಲ್ದಾರ್ ಡಾ.ಸ್ಮಿತಾ ರಾಮ್ ಹೇಳಿದ್ದಾರೆ.

ಬಂಟ್ವಾಳ‌ ತಾಲೂಕು ಆಡಳಿತ, ಕಂದಾಯ ಇಲಾಖೆ ಹಾಗೂ ಅನಂತಾಡಿ‌ ಗ್ರಾ.ಪಂ. ಆಶ್ರಯದಲ್ಲಿ‌ ಬಾಬನಕಟ್ಟೆ ಶಾಲೆಯಲ್ಲಿ ಶನಿವಾರ ನಡೆದ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹರಿಸುವುದು ಹಾಗೂ ಇಲಾಖೆ ಮತ್ತು ಗ್ರಾಮಸ್ಥರ ಅಂತರವನ್ನು ಕಡಿನೆ ಮಾಡುವುದು ಇದರ ಆಶಯ ಎಂದವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಗಣೇಶ್ ಪೂಜಾರಿ ವಹಿಸಿದ್ದರು.ಅನಂತಾಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಮ್ಮ ಪಂಚಾಯತ್ ‌ಗೆ ಹೆಮ್ಮೆಯ ವಿಷಯವಾಗಿದ್ದು, ಗ್ರಾಮದ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುವ ಆಶಯವಿದೆ ಎಂದರು.

ಗ್ರಾ.ಪಂ.ಉಪಾಧ್ಯಕ್ಷ ಕುಸುಮಾಧರ, ತಾಲೂಕು ಹಿಂದುಳಿದ ವರ್ಗಗಳ‌ ಅಭಿವೃದ್ಧಿ ಅಧಿಕಾರಿ ಬಿಂಧ್ಯಾ ನಾಯಕ್, ಪಿಡಿಓ ಅಜಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಟ್ಲ ಉಪತಹಶೀಲ್ದಾರ್ ವಿಜಯ ವಿಕ್ರಮ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ಪ್ರಶಾಂತ್ ವಂದಿಸಿದರು. ಗ್ರಾಮಕರಣಿಕ ಅನಿಲ್ ಕುಮಾರ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು