News Karnataka Kannada
Monday, April 29 2024
ಮಂಗಳೂರು

ಸಹಕಾರಿ ಬ್ಯಾಂಕ್ ಗೆ ನುಗ್ಗಿದ ಕಳ್ಳರು ಹಣಕ್ಕಾಗಿ ಹುಡುಕಾಟ ನಡೆಸಿ ಬರಿಗೈಯಲ್ಲಿ ವಾಪಾಸ್

Local News
Photo Credit :
ಬಂಟ್ವಾಳ: ಸಹಕಾರಿ ಬ್ಯಾಂಕ್ ಒಂದಕ್ಕೆ ನುಗ್ಗಿದ ಕಳ್ಳರು ಹಣಕ್ಕಾಗಿ ಹುಡುಕಾಟ ನಡೆಸಿ ಬರಿಗೈಯಲ್ಲಿ ವಾಪಾಸಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ  ಪ್ರಧಾನ ಕಛೇರಿಯ ಶಟರ್ ಮುರಿದು ಒಳ ನುಗ್ಗಿದ ಕಳ್ಳರು ಬ್ಯಾಂಕ್ ನೊಳಗೆ ಜಾಲಾಡಿ ಯಾವುದೇ ಪ್ರಯೋಜನವಿಲ್ಲ ದೆ ವಾಪಾಸಾಗಿದ್ದಾರೆ. .
ಹಲವಾರು ವರ್ಷಗಳಿಂದ  ಕಾರ್ಯಾಚರಿಸುತ್ತಿರುವ ಸಿದ್ದಕಟ್ಟೆ ಸಹಕಾರಿ ಬ್ಯಾಂಕ್ ನ ಎದುರಿನ ಶಟರ್ ನ್ನು ಪಿಕ್ಕಾಸು ಬಳಸಿ ಬೀಗ ಮುರಿದು ಬ್ಯಾಂಕ್ ಒಳಗೆ ನುಗ್ಗಿದ್ದಾರೆ , ಬಳಿಕ ಬ್ಯಾಂಕ್ ಗೊಡ್ರಜ್ ಹಾಗೂ ಕ್ಯಾಶ್ ಕೌಂಟರ್ ನ್ನು ಜಾಲಾಡಿದ್ದಾರೆ .
ಬೆಳಿಗ್ಗೆ ಬ್ಯಾಂಕ್ ನ ಸಮೀಪದ ಅಂಗಡಿಯವರು ನೋಡಿದಾಗ ಬ್ಯಾಂಕ್ ನ ಶಟರ್ ಮುರಿದ ಬಗ್ಗೆ ಗಮನಕ್ಕೆ ಬಂದಿದ್ದು ಬಂಟ್ವಾಳ ಪೋಲೀಸರಿಗೆ ಮಾಹಿತಿ ನೀಡಲಾಗಿದೆ. ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಕುರುಹುಗಳು ಪತ್ತೆಯಾಗಿದ್ದು, ಕೃತ್ಯಕ್ಕರ ಬಳಸಲಾಗಿದ್ದ ಪಿಕ್ಕಾಸು ಹಾಗೂ ಕಬ್ಬಿಣದ ಸಲಾಕೆಯನ್ನು ಬ್ಯಾಂಕ್ ಸಮೀಪವೇ ಎಸೆದಿದ್ದಾರೆ.
 ಸ್ಥಳಕ್ಕೆ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ಭೇಟಿ ನೀಡಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಗ್ರಾಮಾಂತರ ಠಾಣಾಧಿಕಾರಿ.ಹರೀಶ್, ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಎಸ್. ಐ.ಸಂಜೀವ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು