ಸಾಧನೆಯ ಗುರುತು ಮೂಡಿಸುವಲ್ಲಿ ಸಾಹಿತ್ಯವೂ ಒಂದು ಮಾರ್ಗ : ಡಾ.ಮಾಧವ ಭಟ್

ಸಾಹಿತಿ, ಪ್ರಾಧ್ಯಾಪಕ ಡಾ.ಶ್ರೀಧರ ಎಚ್.ಜಿ ಅವರ ಪ್ರಸ್ಥಾನ ಕಾದಂಬರಿ ಲೋಕಾರ್ಪಣೆ

ಪುತ್ತೂರು: ಪ್ರತಿಯೊಬ್ಬನ ಜೀವನವೂ ನಿಗದಿತ ಸಮಯದೊಳಗೆ ಆಗಿ ಹೋಗುವುದು ಹೌದಾದರೂ ಅಂತಹ ಜೀವನದಲ್ಲಿ ಸಮಾಜ ಗುರುತಿಸಬಹುದಾದ ಹೆಗ್ಗುರುತನ್ನು ಮೂಡಿಸುವುದು ಸಾಧನೆ ಎನಿಸಿಕೊಳ್ಳುತ್ತದೆ. ಅಂತಹ ನೆಲೆಯಿಂದ ಸಾಹಿತ್ಯವನ್ನೂ ಸಾಧನೆಯ ಮಜಲಾಗಿ ಕಾಣಬಹುದು.

ಸಾಹಿತ್ಯದಲ್ಲೂ ಜಲ ಸಾಹಿತ್ಯ, ನೆಲ ಸಾಹಿತ್ಯ, ಪ್ರಾಕೃತಿಕ ಸಾಹಿತ್ಯವೇ ಮೊದಲಾದ ನಾನಾ ಬಗೆಯ ವೈವಿಧ್ಯಮಯ ಸಾಹಿತ್ಯ ಪರಂಪರೆಗಳು ಕಾಣಿಸಲಾರಂಭಿಸಿವೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಹಾಗೂ ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ಹೇಳಿದರು.

ಅವರು ಪುತ್ತೂರಿನ ನೆಹರುನಗರದಲ್ಲಿನ ಕಾಡು ಬಳಗದ ಆಶ್ರಯದಲ್ಲಿ ಕಾಡು ಬಯಲು ಮಂದಿರದಲ್ಲಿ ಸಾಹಿತಿ ಮತ್ತು ಕನ್ನಡ ಪ್ರಾಧ್ಯಾಪಕ ಡಾ.ಶ್ರೀಧರ ಎಚ್.ಜಿ ಅವರ ಪ್ರಸ್ಥಾನ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಭಾನುವಾರ ಮಾತನಾಡಿದರು.

ಡಾ.ಶ್ರೀಧರ್ ಅವರ ಕಾದಂಬರಿಯಲ್ಲಿ ನಾಟಕೀಯತೆ ಅದ್ಭುತವಾಗಿ ಮೂಡಿಬಂದಿದೆ. ಭೂತಕಾಲ, ವರ್ತಮಾನ ಕಾಲ ಹಾಗೂ ಭವಿಷ್ಯತ್ ಕಾಲದ ನಡುವೆ ಸುಲಲಿತವಾದ ಹೊಂದಾಣಿಕೆಯನ್ನು ತರುವುದೇ ಕಾದಂಬರಿಕಾರನ ನಿಜವಾದ ಸಾಮರ್ಥ್ಯ. ಅಂತಹ ಶಕ್ತಿ ಶ್ರೀಧರ ಎಚ್.ಜಿ ಅವರಲ್ಲಿದೆ ಎಂಬುದು ಪ್ರಸ್ಥಾನ ಕಾದಂಬರಿಯನ್ನು ಓದುವಾಗ ಅರಿವಾಗುತ್ತದೆ. ಸಣ್ಣ ಸಣ್ಣ ವಿಚಾರಗಳನ್ನೂ ಬಿಡದೆ ಕಾದಂಬರಿಯನ್ನು ಸಮೃದ್ಧಗೊಳಿಸಲಾಗಿರುವುದು ಹಾಗೂ ಆ ಎಲ್ಲ ವಿಚಾರಗಳಿಗೂ ಮೌಲ್ಯವನ್ನು ತುಂಬಿರುವುದು ಕಾದಂಬರಿಕಾರನ ಹೆಚ್ಚುಗಾರಿಕೆ ಎಂದು ನುಡಿದರು.

ಮನುಷ್ಯ ಮತ್ತು ಪ್ರಕೃತಿ ಒಬ್ಬರಿಗೊಬ್ಬರು ಪೂರಕರು. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ನಾನಾ ಸಂಗತಿಗಳು, ಘಟನೆಗಳು ನಡೆಯುತ್ತಿವೆ. ಇದರ ಪರಿಣಾಮವಾಗಿ ಅನೇಕ ಭಾವನಾತ್ಮಕ ಸಂಗತಿಗಳು ಕಮರಿಹೋಗುತ್ತವೆ. ಪ್ರಸ್ಥಾನ ಕಾದಂಬರಿ ಜಲಾಶಯ ನಿರ್ಮಾಣದ ಕಾರಣದಿಂದಾಗಿ ಊರೊಂದು ಮುಳುಗಡೆಯಾಗುವ ಕಥಾನಕದ ಸುತ್ತ ಬೆಳೆದುಬರುತ್ತದೆ. ಹಾಗೆಯೇ ಕಾದಂಬರಿ ಓದುಗನನ್ನು ಗಾಢವಾಗಿ ಆಕ್ರಮಿಸಿಕೊಳ್ಳುತ್ತದೆ. ಪರಿಣಾಮವಾಗಿ ಕಾದಂಬರಿ ಅಲ್ಲಲ್ಲಿ ಓದುಗನನ್ನು ಕಣ್ಣೀರಾಗಿಸುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತ ಕುಮಾರ ಮಾತನಾಡಿ ಡಾ.ಶ್ರೀಧರ ಎಚ್.ಜಿ ತನ್ನ ಬರಹ ಮತ್ತು ಬದುಕು ಎರಡನ್ನೂ ಪರಿಪೂರ್ಣತೆತೆಯೆಡೆಗೆ ಒಯ್ಯಲು ಪ್ರಯತ್ನಿಸುತ್ತಿರುವ ಸಾಹಿತಿ. ಭಾರತದ ಮೇಲೆ ರಾಜಕೀಯ ದಾಳಿ, ಆರ್ಥಿಕ ದಾಳಿ, ಅಭಿವೃದ್ಧಿಯ ದಾಳಿಯೇ ಮೊದಲಾದ ಅನೇಕ ದಾಳಿಗಳಾಗಿವೆ. ಆ ಎಲ್ಲಾ ಸಂದರ್ಭಗಳಲ್ಲೂ ಭಾರತವನ್ನು ಉಳಿಸಿರುವುದು ಪ್ರೀತಿ ಮತ್ತು ಪ್ರಜ್ಞೆ. ಡಾ.ಶ್ರೀಧರ ಅವರ ಕಾದಂಬರಿ ಕೇವಲ ಮುಳುಗಿದ್ದಷ್ಟನ್ನೇ ಕಟ್ಟಿಕೊಡುವುದಿಲ್ಲ ಬದಲಾಗಿ ಮುಳುಗಿದ ಬದುಕು ಮತ್ತೆ ಪುಟಿದೆದ್ದು ಬೆಳೆದದ್ದನ್ನೂ ತಿಳಿಸಿಕೊಡುತ್ತದೆ ಎಂದು ನುಡಿದರು.

ಕೃತಿಕಾರ ಡಾ.ಶ್ರೀಧರ ಎಚ್.ಜಿ.ಮಾತನಾಡಿ ಕೋರೋನಾ ಸಂದರ್ಭದಲ್ಲಿ ತುಂಬಾ ವಿಷಾದ ಎಲ್ಲೆಡೆಯೂ ಮನೆಮಾಡಿತ್ತು. ಅದೇ ಕಾಲದಲ್ಲಿ ತನ್ನ ಮನಸ್ಸಿಗೂ ನೋವಾಗುವಂತಹ ಘಟನೆಗಳು ನಡೆದವು. ಇವೆಲ್ಲವೂ ಕೂಡಿ ಕಾದಂಬರಿ ಬರೆಯುವ ಮನಃಸ್ಥಿತಿ ಸಿದ್ಧಗೊಂಡಿತು. ಕಾದಂಬರಿಯ ಸಾಲು ಸಾಲುಗಳನ್ನೂ ಅನುಭವಿಸಿ ಬರೆದಿದ್ದೇನೆ. ಹಾಗಾಗಿಯೇ ಕೆಲವೊಂದು ಪಾತ್ರಗಳನ್ನು ಚಿತ್ರಿಸುವಾಗ ಕಣ್ಣ ಹನಿ ಜಾರುತ್ತಿತ್ತು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ನಿರಂಜನ ವಾನಳ್ಳಿ ಮಾತನಾಡಿ ಅಭಿವೃದ್ಧಿ ಯೋಜನೆಯ ಪರಿಣಾಮವಾಗಿ ಎಲ್ಲವನ್ನೂ ದುಡ್ಡಿನ ನೆಲೆಯಲ್ಲಿ ಕಾಣುವ ಪ್ರವೃತ್ತಿ ಬೆಳೆಯಲಾರಂಭಿಸಿದೆ.

ಆದರೆ ಅಭಿವೃದ್ಧಿಯ ಧಾವಂತದಲ್ಲಿ ಕಳೆದುಹೋಗುವ ಸಂಸ್ಕೃತಿ, ಸಾಯುವ ಭಾವನೆಗಳ ಬಗೆಗೆ ಗಮನವೇ ಇಲ್ಲದಂತಾಗಿದೆ. ಜನರ ವಲಸೆಯನ್ನು ಸರ್ಕಾರ ಕೇವಲ ತನ್ನ ಕಣ್ಣಿನಿಂದಷ್ಟೇ ಕಾಣುತ್ತದೆ. ಆದರೆ ಜನರ ದೃಷ್ಟಿಯಿಂದ, ಪ್ರಾಣಿ ಪಕ್ಷಿಗಳ ದೃಷ್ಟಿಯಿಂದಲೂ ಕಾಣಬೇಕಿದೆ. ಡಾ.ಶ್ರೀಧರ ಅವರಲ್ಲಿ ಕಾದಂಬರಿಕಾರನಿಗಿರಬೇಕಾದ ಎಲ್ಲಾ ಗುಣಗಳೂ ಮೇಳೈಸಿವೆ ಎಂದು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಐತ್ತಪ್ಪ ನಾಯ್ಕ್ ಹಾಗೂ ಅನೇಕ ಮಂದಿ ಗಣ್ಯರು ಉಪಸ್ಥಿತರಿದ್ದರು. ಕಾಡು ಬಳಗದ ಸಂಚಾಲಕ ರಾಘವೇಂದ್ರ ಎಚ್.ಎಂ ಸ್ವಾಗತಿಸಿ ಕಾರ್ಯಕ್ರಮ ನಡೆಸಿಕೊಟ್ಟರು.

Sneha Gowda

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

1 hour ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

2 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

2 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

2 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

3 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

3 hours ago