News Karnataka Kannada
Saturday, May 18 2024
ಮಂಗಳೂರು

ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ ರವಾನೆ – ಗೃಹರಕ್ಷಕದಳದ ಸಿಬ್ಬಂದಿ ಅಮಾನತು.

Photo Credit :

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕ ಇಲಾಖೆ ಅಮಾನತು ಮಾಡಿದೆ.

ಪುತ್ತೂರು ಆರ್‌ಟಿಒದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಸಿಬ್ಬಂದಿ ಸಲಾವುದ್ದೀನ್ ನೌಶಾದ್ ಎಂಬವರನ್ನು ಅಮಾನತುಗೊಂಡವರು. ವಾಟ್ಸಪ್‌ನಲ್ಲಿ ಬಂದಿರುವ ಸಾರ್ವಜನಿಕ ಶಾಂತಿ ಕದಡುವ ರೀತಿಯಲ್ಲಿ ಸಂದೇಶವನ್ನು ರವಾನೆ ಮಾಡಿದ ಹಿನ್ನೆಲೆಯಲ್ಲಿ ಆತನ ವಿರುದ್ದ ದೂರುಗಳು ಬಂದಿತ್ತು.

ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕದಳದ ಕಮಾಡೆಂಡ್ ಡಾ. ಮುರಳೀಧರ ಚೂಂತಾರು ಅವರು ಸಲಾವುದ್ದೀನ್ ನೌಶಾದ್ ಅವರನ್ನು ಅಮಾನತಿನಲ್ಲಿಟ್ಟು ಆತನನ್ನು ವಿಚಾರಿಸಿ ವರದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು