News Karnataka Kannada
Tuesday, April 30 2024
ಮಂಗಳೂರು

ಸಾಮಾಜಿಕ ಜಾಲತಾಣದ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು: ಎನ್.ಶಶಿಕುಮಾರ್

On the news that a person was attacked in Ullal, N. Sasikumar
Photo Credit :

 ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಸಿದ್ದಾರೆ.

ಯಾರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಭಂಡ ಧೈರ್ಯ ತೋರುವುದು ಬೇಡ. ಶಾಂತಿ ಕದಡುವ ಕುರಿತ ಸುದ್ದಿಗಳನ್ನು ಶೇರ್ ಮಾಡುವುದು, ಲೈಕ್, ಫಾರ್ವರ್ಡ್, ಕಮೆಂಟ್ ಮಾಡಬಾರದು. ಒಂದು ವೇಳೆ ಶಾಂತಿ ಕದಡುವ ಯತ್ನ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದವರು ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನಕಣ್ಣಿಟ್ಟಿದ್ದು, ಪ್ರತಿಯೊಬ್ಬರ ಚಲನವಲನಗಳನ್ನು ಗಮನಿಸುತ್ತಿದ್ದಾರೆ. ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಶಾಂತಿ ಕದಡುವ ಭಂಡ ಧೈರ್ಯತೋರಬಾರದು. ಕಳೆದ ಎರಡು ತಿಂಗಳಿನಿಂದ ಮಂಗಳೂರು ಪೊಲೀಸರು ಇಂತಹ ಸಮಾಜಘಾತುಕರ ಮೇಲೆ ನಿಗಾ ವಹಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು