ಬಂಟ್ವಾಳ: ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆದಿತ್ಯವಾರ ಬೆಳಕಿಗೆ ಬಂದಿದೆ.
ಕನಪಾದೆ ನಿವಾಸಿ ಕೃಷ್ಣ ಟಿ.ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಿ.ಸಿರೋಡಿನ ಕೃಷ್ಣ ಪ್ರೈಮ್ ಹೋಟೆಲ್ ನ ರೂಮ್ ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಐಸ್ ಕ್ರೀಂ ಒಂದರ ಮಾಲಕರಾಗಿದ್ದು ಜೊತೆಗೆ ಕ್ಲಬ್ ಕೂಡಾ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಉದ್ಯಮ ದಲ್ಲಿ ನಷ್ಟವಾಗಿದ್ದು, ಸಾಲದಬಾಧೆಯಿಂದ ಬಳಲುತ್ತಿದ್ದರು ಎಂಬ ಕಾರಣ ವನ್ನು ಚೀಟಿಯಲ್ಲಿ ಬರೆದು ಕಿಸೆಯಲ್ಲಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್ಐ.ಅವಿನಾಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.